Mysore
31
overcast clouds

Social Media

ಭಾನುವಾರ, 03 ಮೇ 2026
Light
Dark

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ತಂಡ, ಎಚ್‌.ಡಿ.ಕೋಟೆ ತಾಲ್ಲೂಕಿನ ಅಗಸನಹುಂಡಿ ಬಸ್‌ ನಿಲ್ದಾಣದ ಬಳಿ ಚಿಪ್ಪುಹಂದಿಯನ್ನು ಬೇಟೆಯಾಡಿ ಅದರ ಮಾಂಸ ಹಾಗೂ ಮುಳ್ಳುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದೆ. ಬಂಧಿತ ವ್ಯಕ್ತಿ ಹರೀಶ್‌ ಎಂದು ಗುರುತಿಸಲಾಗಿದೆ. ಆರೋಪಿ ಬಳಿ ಬೇಟೆಗೆ ಬಳಸಿದ ಸಾಧನಗಳು ಹಾಗೂ ಮುಳ್ಳುಹಂದಿಯ ಅವಶೇಷಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಳ್ಳುಹಂದಿ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಶೆಡ್ಯೂಲ್ IVರ ಅಡಿಯಲ್ಲಿ ಸಂರಕ್ಷಿತ ಪ್ರಾಣಿಯಾಗಿದ್ದು, ಇದರ ಬೇಟೆ, ಸಾಗಾಟ, ಮಾರಾಟ ಶಿಕ್ಷಾರ್ಹ ಅಪರಾಧ. ಆರೋಪಿ ವಿರುದ್ಧ ಕಾಯ್ದೆಯ ಸೆಕ್ಷನ್ 9, 39 ಮತ್ತು 51ರ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

‘ಮುಳ್ಳುಹಂದಿಯ ಮಾಂಸ, ಮುಳ್ಳು, ಮೂಳೆಗಳಿಗೆ ಔಷಧೀಯ ಗುಣವಿದೆ ಎಂಬ ಮೂಢನಂಬಿಕೆಯಿಂದ ಅಕ್ರಮ ಬೇಟೆ ನಡೆಯುತ್ತಿದೆ. ಕಾಡುಪ್ರಾಣಿಗಳ ಬೇಟೆ ಪರಿಸರ ಸಮತೋಲನಕ್ಕೆ ಧಕ್ಕೆ. ಸಾರ್ವಜನಿಕರು ಇಂತಹ ಅಕ್ರಮ ಚಟುವಟಿಕೆ ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆ ಸಹಾಯವಾಣಿ 1926ಗೆ ಮಾಹಿತಿ ನೀಡಬೇಕು’ ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.

Tags:
error: Content is protected !!