ಮೈಸೂರು

ಒಣಗಾಂಜಾ ಮಾರಾಟ : ಓರ್ವ ಬಂಧನ

ಎಚ್.ಡಿ.ಕೋಟೆ : ಪಟ್ಟಣದ ಗದ್ದಿಗೆ ಸರ್ಕಲ್ ಬಳಿ ಅಕ್ರಮವಾಗಿ ಒಣಗಾಂಜಾ ಸೊಪ್ಪು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕೋಟೆ ಪೊಲೀಸರು ಬಂಧಿಸಿ, ಗಾಂಜಾ ಸೊಪ್ಪು ಮತ್ತು ಮಾರಾಟ ಮಾಡಲು ಬಳಸುತ್ತಿದ್ದ ಪ್ಯಾಸೆಂಜರ್ ಆಟೋವನ್ನು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ನಿವಾಸಿ ದೇವರಾಜು ಕುಮಾರ್ ಅಲಿಯಾಸ್ ಅಪ್ಪು ಕುಮಾರ್ ಬಂಧಿತ ಆರೋಪಿ. ೧೭೫ ಗ್ರಾಂ ಗಾಂಜಾ ಸೊಪ್ಪನ್ನು ಬಿಡಿಬಿಡಿಯಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್‌ಪಿ ಮಲ್ಲಿಕ್, ನಾಗೇಶ್, ಹುಣಸೂರು ಉಪ ವಿಭಾಗದ ಡಿವೈಎಸ್ಪಿ ಗೋಪಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಗಂಗಾಧರ್ ನೇತೃತ್ವದಲ್ಲಿ ಎಸ್‌ಐ ಚಿಕ್ಕನಾಯಕ, ಗುಪ್ತ ಮಾಹಿತಿ ಸಿಬ್ಬಂದಿ ಸೈಯದ್ ಕಬೀರುದ್ದಿನ್, ಯೋಗೇಶ್, ಮೋಹನ್, ಮಹೇಶ್, ಮಹದೇವ, ಡ್ರೈವರ್ ನಾಗರಾಜು ಅವರು ದಾಳಿ ನಡೆಸಿ ಆರೋಪಿ ಮತ್ತು ಮಾಲನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

23 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

23 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

23 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

23 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

23 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

23 hours ago