ಮೈಸೂರು

ಮುಂದುವರೆದ ಕಾಡುಪ್ರಾಣಿಗಳ ಹಾವಳಿ : ಬೆಳೆ,ಮನೆ ರಕ್ಷಿಸಿಕೊಳ್ಳುವುದೇ ಸವಾಲು

ಎಚ್.ಡಿ.ಕೋಟೆ : ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಚ್ಚೂರು, ಗೋಳೂರು ಇನ್ನಿತರ ಪ್ರದೇಶಗಳಲ್ಲಿ ಸಣ್ಣ ರೈತರಿಗೆ ಬೆಳೆ ಮತ್ತು ಮನೆಗಳನ್ನು ಕಾಡು ಪ್ರಾಣಿಗಳಿಂದ ರಕ್ಷಿಸಿಕೊಳ್ಳುವುದೇ ಸವಾಲಾಗಿದೆ.

ಎರಡು ದಿನಗಳ ಹಿಂದೆ ಹೊಸೂರು ಬಸವರಾಜ್ ಅವರ ಮನೆಯ ಹಿತ್ತಲಲ್ಲಿ ಕಾಡಾನೆ ಕಾಣಿಸಿಕೊಂಡು ಭೀತಿ ಮೂಡಿಸಿತ್ತು. ಗುರುವಾರ ಮಚ್ಚೂರು ಗ್ರಾಮದಲ್ಲಿ ಬಲರಾಮ ಎಂಬವರ ಮನೆಯ ಬಳಿ ಬಂದು ಹಾನಿ ಮಾಡಿದ್ದು, ಮನೆಯ ನೂರಾರು ಹೆಂಚುಗಳನ್ನು ಪುಡಿ ಪುಡಿ ಮಾಡಿದೆ. ಸಂಜೆ ೭ ಗಂಟೆ ನಂತರ ಸ್ಥಳೀಯರು ಓಡಾಡಲು ಭಯಪಡುವಂತಾಗಿದೆ.

ಪಕ್ಕದಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಹತ್ತಾರು ಕುಟುಂಬಗಳು ಕಾಡಾನೆ ದಾಳಿಯ ಭೀತಿಯಲ್ಲಿದ್ದಾರೆ. ಈ ಕುರಿತು ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಸ್ಥಳೀಯರ ಬೆಳೆಗಳು, ಮನೆಗಳಿಗೆ ಹಾನಿಯಾದಾಗ ಪರಿಹಾರ ನೀಡದೆ, ಅರಣ್ಯ ಭೂಮಿಯ ನೆಪ ಒಡ್ಡಿ ನುಣುಚಿಕೊಳ್ಳುತ್ತಿದ್ದಾರೆ. ಬ್ರಿಟಿಷರ ಕಾಲದಿಂದಲೂ ವಾಸವಿದ್ದರೂ ವಾಸದ ಭೂಮಿಗೆ ಹಕ್ಕು ಪತ್ರ ನೀಡದೆ, ಕಾಡುಪ್ರಾಣಿಗಳಿಂದ ನಷ್ಟಕ್ಕೆ ಪರಿಹಾರ ನೀಡದೆ ಅನ್ಯಾಯ ಮಾಡುತ್ತಿದ್ದಾರೆ. ಇದರಿಂದಾಗಿ ರೈತರು ಕೃಷಿಯಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಇನ್ನಾದರೂ ಸ್ಥಳೀಯ ಶಾಸಕರು, ಅರಣ್ಯ ಅಧಿಕಾರಿಗಳು ಕಾಡಂಚಿನಲ್ಲಿ ರೈಲ್ವೆ ಕಂಬಿಯನ್ನು ಅಳವಡಿಸಿ ಕಾಡಾನೆಗಳ ಹಾವಳಿ ತಡೆಯಬೇಕೆಂದು ಈ ಭಾಗದ ರೈತರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

10 mins ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

24 mins ago

ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಪಕ್ಷ ಇಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್‌ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…

33 mins ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ ಮನೆಗೆ ಡಿಸಿಎಂ ಡಿಕೆಶಿ ಭೇಟಿ

ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ಸಾಂತ್ವನ…

52 mins ago

ಸೌಜನ್ಯ ಅತ್ಯಾಚಾರ, ಅನಾಥ ಶವಗಳ ಪತ್ತೆ ಪ್ರಕರಣ: ಹೊಸ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹಾಗೂ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ…

1 hour ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ನಟ ವಿಜಯ್‌ಗೆ ಸಿಬಿಐ ಸಮನ್ಸ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.12ರಂದು ವಿಚಾರಣೆಗೆ ಹಾಜರಾಗುವಂತೆ ನಟ ಹಾಗೂ ರಾಜಕಾರಣಿ ವಿಜಯ್‌ಗೆ ಕೇಂದ್ರ ತನಿಖಾ…

1 hour ago