ಮೈಸೂರು

ಮುಂದುವರೆದ ಕಾಡುಪ್ರಾಣಿಗಳ ಹಾವಳಿ : ಬೆಳೆ,ಮನೆ ರಕ್ಷಿಸಿಕೊಳ್ಳುವುದೇ ಸವಾಲು

ಎಚ್.ಡಿ.ಕೋಟೆ : ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಚ್ಚೂರು, ಗೋಳೂರು ಇನ್ನಿತರ ಪ್ರದೇಶಗಳಲ್ಲಿ ಸಣ್ಣ ರೈತರಿಗೆ ಬೆಳೆ ಮತ್ತು ಮನೆಗಳನ್ನು ಕಾಡು ಪ್ರಾಣಿಗಳಿಂದ ರಕ್ಷಿಸಿಕೊಳ್ಳುವುದೇ ಸವಾಲಾಗಿದೆ.

ಎರಡು ದಿನಗಳ ಹಿಂದೆ ಹೊಸೂರು ಬಸವರಾಜ್ ಅವರ ಮನೆಯ ಹಿತ್ತಲಲ್ಲಿ ಕಾಡಾನೆ ಕಾಣಿಸಿಕೊಂಡು ಭೀತಿ ಮೂಡಿಸಿತ್ತು. ಗುರುವಾರ ಮಚ್ಚೂರು ಗ್ರಾಮದಲ್ಲಿ ಬಲರಾಮ ಎಂಬವರ ಮನೆಯ ಬಳಿ ಬಂದು ಹಾನಿ ಮಾಡಿದ್ದು, ಮನೆಯ ನೂರಾರು ಹೆಂಚುಗಳನ್ನು ಪುಡಿ ಪುಡಿ ಮಾಡಿದೆ. ಸಂಜೆ ೭ ಗಂಟೆ ನಂತರ ಸ್ಥಳೀಯರು ಓಡಾಡಲು ಭಯಪಡುವಂತಾಗಿದೆ.

ಪಕ್ಕದಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಹತ್ತಾರು ಕುಟುಂಬಗಳು ಕಾಡಾನೆ ದಾಳಿಯ ಭೀತಿಯಲ್ಲಿದ್ದಾರೆ. ಈ ಕುರಿತು ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಸ್ಥಳೀಯರ ಬೆಳೆಗಳು, ಮನೆಗಳಿಗೆ ಹಾನಿಯಾದಾಗ ಪರಿಹಾರ ನೀಡದೆ, ಅರಣ್ಯ ಭೂಮಿಯ ನೆಪ ಒಡ್ಡಿ ನುಣುಚಿಕೊಳ್ಳುತ್ತಿದ್ದಾರೆ. ಬ್ರಿಟಿಷರ ಕಾಲದಿಂದಲೂ ವಾಸವಿದ್ದರೂ ವಾಸದ ಭೂಮಿಗೆ ಹಕ್ಕು ಪತ್ರ ನೀಡದೆ, ಕಾಡುಪ್ರಾಣಿಗಳಿಂದ ನಷ್ಟಕ್ಕೆ ಪರಿಹಾರ ನೀಡದೆ ಅನ್ಯಾಯ ಮಾಡುತ್ತಿದ್ದಾರೆ. ಇದರಿಂದಾಗಿ ರೈತರು ಕೃಷಿಯಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಇನ್ನಾದರೂ ಸ್ಥಳೀಯ ಶಾಸಕರು, ಅರಣ್ಯ ಅಧಿಕಾರಿಗಳು ಕಾಡಂಚಿನಲ್ಲಿ ರೈಲ್ವೆ ಕಂಬಿಯನ್ನು ಅಳವಡಿಸಿ ಕಾಡಾನೆಗಳ ಹಾವಳಿ ತಡೆಯಬೇಕೆಂದು ಈ ಭಾಗದ ರೈತರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

5 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

6 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

10 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

10 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

10 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

12 hours ago