ಮೈಸೂರು: ವ್ಯಕ್ತಿಯೊಬ್ಬರಿಗೆ ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ೩.೨೧ ಲಕ್ಷ ರೂ. ವಂಚಿಸಲಾಗಿದೆ.
ಬೋಗಾದಿ ಎರಡನೇ ನಿವಾಸಿ ಡಾ.ಆರ್.ಎಲ್. ಚಿಲಕವಾಡ್ ಹಣ ಕಳೆದುಕೊಂಡವರು. ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ಲಿಂಕ್ ಕಳುಹಿಸಿ, ಅದನ್ನು ಒತ್ತಿದ ವೇಳೆ ಬ್ಯಾಂಕ್ ಖಾತೆಯಿಂದ ೩.೨೧ ಲಕ್ಷ ರೂ. ಮೋಸದಿಂದ ವರ್ಗಾಯಿಸಿಕೊಂಡಿದ್ದಾರೆ. ಭಾನುವಾರ ಸಂಜೆ ವೇಳೆ ಕಳುಹಿಸಿದ ಲಿಂಕ್ ಒತ್ತಿದ ವೇಳೆ ಎಸ್ಬಿಐ ಬ್ಯಾಂಕ್ ಯೋನೋ ಆ್ಯಪ್ನಲ್ಲಿ ಪಾಸ್ ವರ್ಡ್ ಹಂಚಿಕೊಂಡಿದ್ದು, ನಂತರ ಖಾತೆಯಿಂದ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದು, ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಿಳೆಗೆ ವಂಚನೆ
ಮೈಸೂರು: ಮನೆಯನ್ನು ಲೀಸ್ ಹಾಕಿಕೊಡುವುದಾಗಿ ಇಲ್ಲಿನ ಗೌಸಿಯಾ ನಗರದ ಮಹಿಳೆಯೊಬ್ಬರಿಗೆ ವಂಚನೆ ಎಸಗಿದ್ದು, ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಯಲಹಂಕದ ಮೂವರು ವ್ಯಕ್ತಿಗಳು ದುಡ್ಡು ತೆಗೆದುಕೊಂಡು, ಹಿಂತಿರುಗಿಸಿಲ್ಲ. ಹಣ ಕೇಳಿದರೆ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…