ಮೈಸೂರು

ಹೊಸ ಸೇವೆ ಆರಂಭಿಸಿದ ಮೈಸೂರು ಮಹಾ ನಗರ ಪಾಲಿಕೆ

ಮೈಸೂರು : ಇನ್ನು ಮುಂದೆ ಮೈಸೂರಿನ ವ್ಯಾಪಾರಸ್ಥರು ಟ್ರೇಡ್‌ ಲೈಸನ್ಸ್‌ ನವೀಕರಣ ಮಾಡಲು ಪಾಲಿಕೆ ಕಚೇರಿಗೆ ಅಲೆಯಬೇಕಿಲ್ಲ. ತಾವಿರುವ ಸ್ಥಳದಲ್ಲಿಯೇ ಕುಳಿತು ಆನ್‌ಲೈನ್‌ ಮೂಲಕ ವ್ಯಾಪಾರ ಪರವಾನಗಿ ಪಡೆಯಬಹುದಾಗಿದ್ದು, ಈ ಹೊಸ ಸೇವೆಯನ್ನು ಮೈಸೂರು ಮಹಾನಗರ ಪಾಲಿಕೆ ಆರಂಭಿಸಿದೆ.

ವ್ಯಾಪಾರಸ್ಥರಿಗೆ   ಪರವಾನಗಿ ಶುಲ್ಕ ಪಾವತಿಸಲು ಅನುಕೂಲವಾಗಲು ತೆರಿಗೆ ಪಾವತಿಯ ವ್ಯವಸ್ಥೆಯ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರು ಸೇರಿದಂತೆ ನಾನಾ ಸಂಘಟನೆಗಳ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಪಾಲಿಕೆಯ ಕೌನ್ಸಿಲ್‌ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಮೇಯರ್‌ ಶಿವಕುಮಾರ್‌ ಅವರು, ಆನ್‌ಲೈನ್‌ ವ್ಯವಸ್ಥೆ ಮೂಲಕ ಟ್ರೇಡ್‌ ಲೈಸನ್ಸ್‌ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರ ಸಂಘಟನೆಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿ. ಆನ್‌ಲೈನ್‌ ಮೂಲಕ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಕೆಲ ವ್ಯಾಪಾರಸ್ಥರಿಗೆ ಆನ್‌ಲೈನ್‌ ಮೂಲಕ ತೆರಿಗೆ ಪಾವತಿಯ ಪ್ರತಿಯನ್ನು ಸಭೆಯಲ್ಲಿ ನೀಡಲಾಯಿತು.

ಸಭೆಯಲ್ಲಿಉಪಮೇಯರ್‌ ಡಾ.ರೂಪಾ ಯೋಗೇಶ್‌, ಮಾಜಿ ಮೇಯರ್‌ ಅಯೂಬ್‌ ಖಾನ್‌, ಪಾಲಿಕೆ ಸದಸ್ಯೆ ಅಶ್ವಿನಿ ಅನಂತು, ಆಯುಕ್ತ ಜಿ.ಲಕ್ಷೀಕಾಂತ ರೆಡ್ಡಿ, ಆರೋಗ್ಯಾಧಿಕಾರಿ ಡಾ.ನಾಗರಾಜು, ಹೊಟೇಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಾಂತ್‌, ಮೈಸೂರು ಟ್ರೇಡರ್ಸ್‌ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ. ಪ್ರಶಾಂತ್‌ಗೌಡ, ಮೈಸೂರು ಕಲ್ಯಾಣ ಮಂಟಪಗಳ ಮಾಲೀಕರ ಸಂಘದ ಅಧ್ಯಕ್ಷ ಸತ್ಯ ನಾರಾಯಣ್‌ ಸೇರಿದಂತೆ ನಾನಾ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬಾರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್‌ ಲೈಸನ್ಸ್‌ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸಬಹುದು. ಪಾವತಿಯ ರಸೀದಿಯ ಪ್ರಿಂಟ್‌ ಕೂಡ ಪಡೆಯಬಹುದಾಗಿದೆ ಎಂದು ಮೇಯರ್‌ ಶಿವಕುಮಾರ್‌ ಹೇಳಿದರು.

andolana

Recent Posts

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

59 mins ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

2 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

2 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

2 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

2 hours ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

2 hours ago