ಮೈಸೂರು

ಹೊಸ ಸೇವೆ ಆರಂಭಿಸಿದ ಮೈಸೂರು ಮಹಾ ನಗರ ಪಾಲಿಕೆ

ಮೈಸೂರು : ಇನ್ನು ಮುಂದೆ ಮೈಸೂರಿನ ವ್ಯಾಪಾರಸ್ಥರು ಟ್ರೇಡ್‌ ಲೈಸನ್ಸ್‌ ನವೀಕರಣ ಮಾಡಲು ಪಾಲಿಕೆ ಕಚೇರಿಗೆ ಅಲೆಯಬೇಕಿಲ್ಲ. ತಾವಿರುವ ಸ್ಥಳದಲ್ಲಿಯೇ ಕುಳಿತು ಆನ್‌ಲೈನ್‌ ಮೂಲಕ ವ್ಯಾಪಾರ ಪರವಾನಗಿ ಪಡೆಯಬಹುದಾಗಿದ್ದು, ಈ ಹೊಸ ಸೇವೆಯನ್ನು ಮೈಸೂರು ಮಹಾನಗರ ಪಾಲಿಕೆ ಆರಂಭಿಸಿದೆ.

ವ್ಯಾಪಾರಸ್ಥರಿಗೆ   ಪರವಾನಗಿ ಶುಲ್ಕ ಪಾವತಿಸಲು ಅನುಕೂಲವಾಗಲು ತೆರಿಗೆ ಪಾವತಿಯ ವ್ಯವಸ್ಥೆಯ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರು ಸೇರಿದಂತೆ ನಾನಾ ಸಂಘಟನೆಗಳ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಪಾಲಿಕೆಯ ಕೌನ್ಸಿಲ್‌ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಮೇಯರ್‌ ಶಿವಕುಮಾರ್‌ ಅವರು, ಆನ್‌ಲೈನ್‌ ವ್ಯವಸ್ಥೆ ಮೂಲಕ ಟ್ರೇಡ್‌ ಲೈಸನ್ಸ್‌ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರ ಸಂಘಟನೆಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿ. ಆನ್‌ಲೈನ್‌ ಮೂಲಕ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಕೆಲ ವ್ಯಾಪಾರಸ್ಥರಿಗೆ ಆನ್‌ಲೈನ್‌ ಮೂಲಕ ತೆರಿಗೆ ಪಾವತಿಯ ಪ್ರತಿಯನ್ನು ಸಭೆಯಲ್ಲಿ ನೀಡಲಾಯಿತು.

ಸಭೆಯಲ್ಲಿಉಪಮೇಯರ್‌ ಡಾ.ರೂಪಾ ಯೋಗೇಶ್‌, ಮಾಜಿ ಮೇಯರ್‌ ಅಯೂಬ್‌ ಖಾನ್‌, ಪಾಲಿಕೆ ಸದಸ್ಯೆ ಅಶ್ವಿನಿ ಅನಂತು, ಆಯುಕ್ತ ಜಿ.ಲಕ್ಷೀಕಾಂತ ರೆಡ್ಡಿ, ಆರೋಗ್ಯಾಧಿಕಾರಿ ಡಾ.ನಾಗರಾಜು, ಹೊಟೇಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಾಂತ್‌, ಮೈಸೂರು ಟ್ರೇಡರ್ಸ್‌ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ. ಪ್ರಶಾಂತ್‌ಗೌಡ, ಮೈಸೂರು ಕಲ್ಯಾಣ ಮಂಟಪಗಳ ಮಾಲೀಕರ ಸಂಘದ ಅಧ್ಯಕ್ಷ ಸತ್ಯ ನಾರಾಯಣ್‌ ಸೇರಿದಂತೆ ನಾನಾ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬಾರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್‌ ಲೈಸನ್ಸ್‌ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸಬಹುದು. ಪಾವತಿಯ ರಸೀದಿಯ ಪ್ರಿಂಟ್‌ ಕೂಡ ಪಡೆಯಬಹುದಾಗಿದೆ ಎಂದು ಮೇಯರ್‌ ಶಿವಕುಮಾರ್‌ ಹೇಳಿದರು.

andolana

Recent Posts

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

7 seconds ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

3 mins ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

13 mins ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

30 mins ago

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

1 hour ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

1 hour ago