ಮೈಸೂರು

ಹೊಸ ಸೇವೆ ಆರಂಭಿಸಿದ ಮೈಸೂರು ಮಹಾ ನಗರ ಪಾಲಿಕೆ

ಮೈಸೂರು : ಇನ್ನು ಮುಂದೆ ಮೈಸೂರಿನ ವ್ಯಾಪಾರಸ್ಥರು ಟ್ರೇಡ್‌ ಲೈಸನ್ಸ್‌ ನವೀಕರಣ ಮಾಡಲು ಪಾಲಿಕೆ ಕಚೇರಿಗೆ ಅಲೆಯಬೇಕಿಲ್ಲ. ತಾವಿರುವ ಸ್ಥಳದಲ್ಲಿಯೇ ಕುಳಿತು ಆನ್‌ಲೈನ್‌ ಮೂಲಕ ವ್ಯಾಪಾರ ಪರವಾನಗಿ ಪಡೆಯಬಹುದಾಗಿದ್ದು, ಈ ಹೊಸ ಸೇವೆಯನ್ನು ಮೈಸೂರು ಮಹಾನಗರ ಪಾಲಿಕೆ ಆರಂಭಿಸಿದೆ.

ವ್ಯಾಪಾರಸ್ಥರಿಗೆ   ಪರವಾನಗಿ ಶುಲ್ಕ ಪಾವತಿಸಲು ಅನುಕೂಲವಾಗಲು ತೆರಿಗೆ ಪಾವತಿಯ ವ್ಯವಸ್ಥೆಯ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರು ಸೇರಿದಂತೆ ನಾನಾ ಸಂಘಟನೆಗಳ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಪಾಲಿಕೆಯ ಕೌನ್ಸಿಲ್‌ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಮೇಯರ್‌ ಶಿವಕುಮಾರ್‌ ಅವರು, ಆನ್‌ಲೈನ್‌ ವ್ಯವಸ್ಥೆ ಮೂಲಕ ಟ್ರೇಡ್‌ ಲೈಸನ್ಸ್‌ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರ ಸಂಘಟನೆಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿ. ಆನ್‌ಲೈನ್‌ ಮೂಲಕ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಕೆಲ ವ್ಯಾಪಾರಸ್ಥರಿಗೆ ಆನ್‌ಲೈನ್‌ ಮೂಲಕ ತೆರಿಗೆ ಪಾವತಿಯ ಪ್ರತಿಯನ್ನು ಸಭೆಯಲ್ಲಿ ನೀಡಲಾಯಿತು.

ಸಭೆಯಲ್ಲಿಉಪಮೇಯರ್‌ ಡಾ.ರೂಪಾ ಯೋಗೇಶ್‌, ಮಾಜಿ ಮೇಯರ್‌ ಅಯೂಬ್‌ ಖಾನ್‌, ಪಾಲಿಕೆ ಸದಸ್ಯೆ ಅಶ್ವಿನಿ ಅನಂತು, ಆಯುಕ್ತ ಜಿ.ಲಕ್ಷೀಕಾಂತ ರೆಡ್ಡಿ, ಆರೋಗ್ಯಾಧಿಕಾರಿ ಡಾ.ನಾಗರಾಜು, ಹೊಟೇಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಾಂತ್‌, ಮೈಸೂರು ಟ್ರೇಡರ್ಸ್‌ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ. ಪ್ರಶಾಂತ್‌ಗೌಡ, ಮೈಸೂರು ಕಲ್ಯಾಣ ಮಂಟಪಗಳ ಮಾಲೀಕರ ಸಂಘದ ಅಧ್ಯಕ್ಷ ಸತ್ಯ ನಾರಾಯಣ್‌ ಸೇರಿದಂತೆ ನಾನಾ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬಾರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್‌ ಲೈಸನ್ಸ್‌ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸಬಹುದು. ಪಾವತಿಯ ರಸೀದಿಯ ಪ್ರಿಂಟ್‌ ಕೂಡ ಪಡೆಯಬಹುದಾಗಿದೆ ಎಂದು ಮೇಯರ್‌ ಶಿವಕುಮಾರ್‌ ಹೇಳಿದರು.

andolana

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago