ಮೈಸೂರು

ಹೊಸ ಸೇವೆ ಆರಂಭಿಸಿದ ಮೈಸೂರು ಮಹಾ ನಗರ ಪಾಲಿಕೆ

ಮೈಸೂರು : ಇನ್ನು ಮುಂದೆ ಮೈಸೂರಿನ ವ್ಯಾಪಾರಸ್ಥರು ಟ್ರೇಡ್‌ ಲೈಸನ್ಸ್‌ ನವೀಕರಣ ಮಾಡಲು ಪಾಲಿಕೆ ಕಚೇರಿಗೆ ಅಲೆಯಬೇಕಿಲ್ಲ. ತಾವಿರುವ ಸ್ಥಳದಲ್ಲಿಯೇ ಕುಳಿತು ಆನ್‌ಲೈನ್‌ ಮೂಲಕ ವ್ಯಾಪಾರ ಪರವಾನಗಿ ಪಡೆಯಬಹುದಾಗಿದ್ದು, ಈ ಹೊಸ ಸೇವೆಯನ್ನು ಮೈಸೂರು ಮಹಾನಗರ ಪಾಲಿಕೆ ಆರಂಭಿಸಿದೆ.

ವ್ಯಾಪಾರಸ್ಥರಿಗೆ   ಪರವಾನಗಿ ಶುಲ್ಕ ಪಾವತಿಸಲು ಅನುಕೂಲವಾಗಲು ತೆರಿಗೆ ಪಾವತಿಯ ವ್ಯವಸ್ಥೆಯ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರು ಸೇರಿದಂತೆ ನಾನಾ ಸಂಘಟನೆಗಳ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಪಾಲಿಕೆಯ ಕೌನ್ಸಿಲ್‌ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಮೇಯರ್‌ ಶಿವಕುಮಾರ್‌ ಅವರು, ಆನ್‌ಲೈನ್‌ ವ್ಯವಸ್ಥೆ ಮೂಲಕ ಟ್ರೇಡ್‌ ಲೈಸನ್ಸ್‌ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರ ಸಂಘಟನೆಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿ. ಆನ್‌ಲೈನ್‌ ಮೂಲಕ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಕೆಲ ವ್ಯಾಪಾರಸ್ಥರಿಗೆ ಆನ್‌ಲೈನ್‌ ಮೂಲಕ ತೆರಿಗೆ ಪಾವತಿಯ ಪ್ರತಿಯನ್ನು ಸಭೆಯಲ್ಲಿ ನೀಡಲಾಯಿತು.

ಸಭೆಯಲ್ಲಿಉಪಮೇಯರ್‌ ಡಾ.ರೂಪಾ ಯೋಗೇಶ್‌, ಮಾಜಿ ಮೇಯರ್‌ ಅಯೂಬ್‌ ಖಾನ್‌, ಪಾಲಿಕೆ ಸದಸ್ಯೆ ಅಶ್ವಿನಿ ಅನಂತು, ಆಯುಕ್ತ ಜಿ.ಲಕ್ಷೀಕಾಂತ ರೆಡ್ಡಿ, ಆರೋಗ್ಯಾಧಿಕಾರಿ ಡಾ.ನಾಗರಾಜು, ಹೊಟೇಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಾಂತ್‌, ಮೈಸೂರು ಟ್ರೇಡರ್ಸ್‌ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ. ಪ್ರಶಾಂತ್‌ಗೌಡ, ಮೈಸೂರು ಕಲ್ಯಾಣ ಮಂಟಪಗಳ ಮಾಲೀಕರ ಸಂಘದ ಅಧ್ಯಕ್ಷ ಸತ್ಯ ನಾರಾಯಣ್‌ ಸೇರಿದಂತೆ ನಾನಾ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬಾರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್‌ ಲೈಸನ್ಸ್‌ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸಬಹುದು. ಪಾವತಿಯ ರಸೀದಿಯ ಪ್ರಿಂಟ್‌ ಕೂಡ ಪಡೆಯಬಹುದಾಗಿದೆ ಎಂದು ಮೇಯರ್‌ ಶಿವಕುಮಾರ್‌ ಹೇಳಿದರು.

andolana

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

35 mins ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

9 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 hours ago