ಮೈಸೂರು: ಇಲ್ಲಿನ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯ ೨ನೇ ಕ್ರಾಸ್ನ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ೭೫ನೇ ವರ್ಷದ ಜಾತ್ರಾ ಮಹೋತ್ಸವದ ಹಂಗವಾಗಿ ಸೋಮವಾರ ರಾತ್ರಿ ಸಿದ್ದಪ್ಪಾಜಿ ದೇವರ ರಥೋತ್ಸವ ನಡೆಯಿತು.
ರಥೋತ್ಸವದಲ್ಲಿ ಹೂ ಹೊಂಬಾಳೆ ಅಲಂಕೃತವಾದ ಬಸವ ಕಳಸ ಹೊತ್ತ ಮಕ್ಕಳೊಂದಿಗೆ ಹೆಜ್ಜೆ ಹಾಕಿತು. ತಮಟೆ ಮತ್ತು ಹೂ ದೀಪಾಲಂಕಾರಗಳಿಂದ ಕೂಡಿದ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಬೆಳಿಗ್ಗೆಯಿಂದಲೂ ಗಣಪತಿ ಪೂಜೆ, ಪುಣ್ಯಾಹಃ, ಕಲಾ ಹೋಮ, ಪೂರ್ಣಾಹುತಿ ಪೂಜಾ ವಿಧಿವಿಧಾನಗಳು ನಡೆದವು. ಮಧ್ಯಾಹ್ನ ಕುಂಭಾಭಿಷೇಕ, ಮಹಾ ಮಂಗಳಾರತಿ ನಡೆಯಿತು. ನಂತರ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು.
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…
ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ…
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…