Siddaramaiah. Photo: PTI
ಮೈಸೂರು : ಮೈಸೂರು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಈ ವೇಳೆ ಇತರೆ ಪಕ್ಷದ ನಯಕರು ʼಕೈʼ ಹಿಡಿಯಲು ಮುಂದಾಗಿದ್ದಾರೆ.
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ, ಪುತ್ರ ಭರತ್ ರಾಮಸ್ವಾಮಿ ಸೇರಿ 30 ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಇನ್ನು ಮೈಸೂರು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರೋ ಸಿಎಂ ಸಿದ್ದರಾಮಯ್ಯ, ಮೂರು ದಿನ ಠಿಕಾಣಿ ಹೂಡಿ, ಆಪರೇಷನ್ ಅಸ್ತ್ರ ಹೂಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮುಂದುವರೆದಿದೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಿಎಂ ಭಾರಿ ಕಸರತ್ತು ನಡೆಸುತ್ತಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…