ಮೈಸೂರು

ಆಪರೇಷನ್‌ ಕಮಲ ಪರಿಚಯವಾದದ್ದೇ ಕರ್ನಾಟಕ ಬಿಜೆಪಿಯಿಂದ : ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್‌ ಪಕ್ಷ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಹೀಗಾಗಿ ಕಾಂಗ್ರೆಸ್‌ ಗೆ ಬಹುಮತ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ ಬಿಜೆಪಿಯವರು ಆಗ ಗೆದ್ದಿದ್ದ ಸ್ವತಂತ್ರ ಅಭ್ಯರ್ಥಿಗಳನ್ನು ಸೇರಿಸಿಕೊಂಡು ಸರ್ಕಾರ ಮಾಡಿದರು. ಆ ಸರ್ಕಾರದಲ್ಲಿ 3 ಜನ ಮುಖ್ಯಮಂತ್ರಿಗಳಾದರು, ಕೆಲವು ಸ್ವತಂತ್ರ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದರು. 2018ರಲ್ಲಿ ಕೂಡ ಬಿಜೆಪಿ ಹೆಚ್ಚು ಸ್ಥಾನ ಪಡೆದ ಪಕ್ಷವಾಯಿತೇ ಹೊರತು ಬಹುಮತ ಸಾಬೀತು ಮಾಡಲು ಬೇಕಾಗುವಷ್ಟು ಸ್ಥಾನಗಳು ಬರಲಿಲ್ಲ. ಮತ್ತೆ ಯಡಿಯೂರಪ್ಪ ಅವರು ಮೂರೇ ದಿನಕ್ಕೆ ರಾಜೀನಾಮೆ ನೀಡಬೇಕಾಯಿತು, ನಂತರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ಸಮ್ಮಿಶ್ರ ಸರ್ಕಾರ ಬಂದಿತು. ಕುಮಾರಸ್ವಾಮಿ ಅವರು ಒಂದು ವರ್ಷ ಎರಡು ತಿಂಗಳು ಮಾತ್ರ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ರು. ಆಮೇಲೆ ಆಪರೇಷನ್‌ ಕಮಲದ ಮೂಲಕ ಬಿಜೆಪಿ ಸರ್ಕಾರ ಬಂತು. ಈ ಆಪರೇಷನ್‌ ಕಮಲ ಎಂಬುದು ಪರಿಚಯವಾದದ್ದೇ ಕರ್ನಾಟಕ ಬಿಜೆಪಿಯಿಂದ. ಶಾಸಕರಿಗೆ ಹಣ ಕೊಟ್ಟು ಖರೀದಿಸಿ, ಅವರಿಂದ ರಾಜೀನಾಮೆ ಕೊಡಿಸಿ ಉಪಚುನಾವಣೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಗೆಲ್ಲಿಸುವುದು ಆಪರೇಷನ್‌ ಕಮಲ. ಇಂಥ ದ್ವಂದ್ವ ನಿಲುವು ಇರುವಂತವರನ್ನು ಸೇರಿಸಿಕೊಂಡು ಸರ್ಕಾರ ರಚನೆ ಮಾಡಿದರೆ ಯಾವ ಸರ್ಕಾರ ಕೂಡ ಜನಪರವಾಗಿರಲು ಸಾಧ್ಯವಿಲ್ಲ ಎಂದರು.

ಬಿಜೆಪಿ ವಿರುದ್ಧ ಜನ ಇಂದು ಬೇಸತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರ ಭ್ರಷ್ಟಾಚಾರ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 40% ಕಮಿಷನ್‌ ಸರ್ಕಾರ ಎಂದು ದೂರಿದ್ದಾರೆ. ಪ್ರಧಾನಿ ಮೋದಿ ಅವರು ದೇಶದ ಜನರಿಗೆ ‘ನ ಖಾವೂಂಗ ನ ಖಾನೇದೂಂಗ’ ಎಂದಿದ್ದರು, ಆದರೆ ಪತ್ರ ಬರೆದು ಇಷ್ಟು ಕಾಲ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ಅವರ ಈ ಭರವಸೆ ಕೇವಲ ಪ್ರಚಾರಕ್ಕಾಗಿ ನೀಡಿದ್ದ ಹೇಳಿಕೆ ಮಾತ್ರ. ರುಪ್ಸಾ (ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ) ದವರು ಪ್ರಧಾನಿಗಳಿಗೆ ಪತ್ರ ಬರೆದು ಈ ಸರ್ಕಾರ 40% ಕಮಿಷನ್‌ ಕೇಳುತ್ತಿದ್ದೆ ಎಂದರು. ಬೊಮ್ಮಾಯಿ ಅವರು ತಮ್ಮ ಭ್ರಷ್ಟಾಚಾರಗಳಿಗೆ ದಾಖಲೆ ಕೇಳುತ್ತಾರೆ, ಈ ಪತ್ರಗಳು ದಾಖಲಾತಿಗಳಲ್ವಾ ಎಂದು ಪ್ರಶ್ನಿಸಿದ್ದಾರೆ.

ಪಿಎಸ್‌ ಐ ನೇಮಕಾತಿಯಲ್ಲಿ ಎಡಿಜಿಪಿ ಸಹಿತವಾಗಿ ಸುಮಾರು 70 ಜನ ಜೈಲಿಗೆ ಹೋದರು, ಇದು ಸಾಕ್ಷಿ ಅಲ್ಲವಾ? ಸಂತೋಷ್‌ ಪಾಟೀಲ್‌ ಎಂಬ ಬಿಜೆಪಿ ಕಾರ್ಯಕರ್ತ ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಗುತ್ತಿಗೆ ಕೆಲಸಗಳನ್ನು ಮಾಡಿ, ಲಂಚ ಕೊಡದ ಕಾರಣಕ್ಕೆ ಬಿಲ್‌ ಹಣ ನೀಡಲಿಲ್ಲ ಎಂದು ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ ಎಂದು ಡೆತ್‌ ನೋಟ್‌ ಬರೆದಿಟ್ಟಿದ್ದರು. ಇದು ಸಾಕ್ಷಿ ಅಲ್ಲವಾ? ನಾವು ಸದನದ ಒಳಗೆ ಮತ್ತು ಹೊರಗೆ ಹಗಲು ರಾತ್ರಿ ಹೋರಾಟವನ್ನು ಮಾಡಿದ್ದೆವು, ಧರಣಿ ಮಾಡಿದ್ದೆವು. ಇದರಿಂದ ಈಶ್ವರಪ್ಪ ರಾಜೀನಾಮೆ ನೀಡಬೇಕಾಯಿತು. ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಅವರು ಸೋಪ್‌ ಮತ್ತು ಡಿಟರ್ಜೆಂಟ್‌ ನಿಗಮದ ಅಧ್ಯಕ್ಷರಾಗಿದ್ದವರು. ಅವರ ಮಗ ಅಪ್ಪನ ಪರವಾಗಿ ಲಂಚ ಪಡೆಯಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಮನೆಯನ್ನು ಶೋಧ ಮಾಡಿದಾಗ ಸುಮಾರು 8 ಕೋಟಿ ಭ್ರಷ್ಟ ಹಣ ಸಿಗುತ್ತದೆ. ಈ ರೀತಿ ರೆಡ್‌ ಹ್ಯಾಂಡಾಗಿ ಸಿಕ್ಕಿಬೀಳುವುದು ದಾಖಲೆಗಳಿಗಿಂತ ಪ್ರಬಲ ಸಾಕ್ಷಿಗಳು. ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಬೀತಾಗಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು ಎಂದರು.

lokesh

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

3 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

4 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

4 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

4 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

5 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

5 hours ago