ಮೈಸೂರು

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮೇಲೆ ಇಡಿ ದಾಳಿಗೆ ಡಾ.ಜಿ. ಪರಮೇಶ್ವರ್ ಯುವ ಸೈನ್ಯ ಖಂಡನೆ

ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರಾದ ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ಉದ್ದೇಶಪೂರ್ವಕವಾಗಿ ದಾಳಿ ಮಾಡಲಾಗಿದ್ದು, ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ಪದೇಪದೇ ಇಡಿ ದಾಳಿ ನಡೆಸುತ್ತಿರುವುದು ಖಂಡನೀಯ. ಮುಂದಿನ ಮುಖ್ಯಮಂತ್ರಿಗಳು ಆಗುತ್ತಾರೆ ಅದಕ್ಕೆ ಅವರನ್ನು ಕುಗ್ಗಿಸಲು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಅವರು ಕುಗ್ಗುವುದಿಲ್ಲ. ಇಡಿ ದಾಳಿಯು ರಾಜಕೀಯ ಪ್ರೇರಿತವಾಗಿದೆ. ಬೇರೆಬೇರೆ ನಾಯಕರ ಶಿಕ್ಷಣ ಸಂಸ್ಥೆಗಳು ಇದ್ದರು, ಅವರ ಮೇಲೆ ದಾಳಿ ಆಗುತ್ತಿಲ್ಲ. 2019ರಲ್ಲಿಯೂ ಪರಮೇಶ್ವರ್ ರವರ ಮೇಲೆ ಇಡಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಅವರಿಗೆ ಏನು ಸಿಗಲಿಲ್ಲ. ಅವರನ್ನೇ ಯಾಕೇ ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುತ್ತಿರುವುದನ್ನು ನೋಡಿದರೆ ನಮಗೆ ಅನುಮಾನ ವ್ಯಕ್ತವಾಗುತ್ತಿದೆ.

ಕಳೆದ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮೇಲೆ ನೀಡಿ ಇಡಿ ದಾಳಿ ನಡೆಸಿತ್ತು. ಹಿರಿಯ ದಲಿತ ರಾಜ್ಯ ನಾಯಕರು ಹಾಗೂ ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಅವರ ಗೌರವಕ್ಕೆ ಧಕ್ಕೆ ತರಲಾಗುತ್ತಿದೆ ಇದನ್ನು ಸಮುದಾಯ ತೀರವಾಗಿ ಖಂಡಿಸುತ್ತದೆ. ಯಾವುದೇ ರೀತಿ ಕಪ್ಪು ಚುಕ್ಕೆ ಇಲ್ಲದೆ ಡಾ. ಜಿ ಪರಮೇಶ್ವರ್ ಅವರು ಆಡಳಿತ ಮಾಡಿದ್ದಾರೆ. ಅವರ ಗೌರವಕ್ಕೆ ಧಕ್ಕೆ ತಂದರೆ ನಾವು ಸುಮ್ಮನಿರುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಡಾ. ಜಿ ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಮುಳ್ಳೂರು ಮಹೇಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…

54 mins ago

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

1 hour ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

2 hours ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

2 hours ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

2 hours ago

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

3 hours ago