ಮೈಸೂರು

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮೇಲೆ ಇಡಿ ದಾಳಿಗೆ ಡಾ.ಜಿ. ಪರಮೇಶ್ವರ್ ಯುವ ಸೈನ್ಯ ಖಂಡನೆ

ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರಾದ ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ಉದ್ದೇಶಪೂರ್ವಕವಾಗಿ ದಾಳಿ ಮಾಡಲಾಗಿದ್ದು, ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ಪದೇಪದೇ ಇಡಿ ದಾಳಿ ನಡೆಸುತ್ತಿರುವುದು ಖಂಡನೀಯ. ಮುಂದಿನ ಮುಖ್ಯಮಂತ್ರಿಗಳು ಆಗುತ್ತಾರೆ ಅದಕ್ಕೆ ಅವರನ್ನು ಕುಗ್ಗಿಸಲು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಅವರು ಕುಗ್ಗುವುದಿಲ್ಲ. ಇಡಿ ದಾಳಿಯು ರಾಜಕೀಯ ಪ್ರೇರಿತವಾಗಿದೆ. ಬೇರೆಬೇರೆ ನಾಯಕರ ಶಿಕ್ಷಣ ಸಂಸ್ಥೆಗಳು ಇದ್ದರು, ಅವರ ಮೇಲೆ ದಾಳಿ ಆಗುತ್ತಿಲ್ಲ. 2019ರಲ್ಲಿಯೂ ಪರಮೇಶ್ವರ್ ರವರ ಮೇಲೆ ಇಡಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಅವರಿಗೆ ಏನು ಸಿಗಲಿಲ್ಲ. ಅವರನ್ನೇ ಯಾಕೇ ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುತ್ತಿರುವುದನ್ನು ನೋಡಿದರೆ ನಮಗೆ ಅನುಮಾನ ವ್ಯಕ್ತವಾಗುತ್ತಿದೆ.

ಕಳೆದ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮೇಲೆ ನೀಡಿ ಇಡಿ ದಾಳಿ ನಡೆಸಿತ್ತು. ಹಿರಿಯ ದಲಿತ ರಾಜ್ಯ ನಾಯಕರು ಹಾಗೂ ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಅವರ ಗೌರವಕ್ಕೆ ಧಕ್ಕೆ ತರಲಾಗುತ್ತಿದೆ ಇದನ್ನು ಸಮುದಾಯ ತೀರವಾಗಿ ಖಂಡಿಸುತ್ತದೆ. ಯಾವುದೇ ರೀತಿ ಕಪ್ಪು ಚುಕ್ಕೆ ಇಲ್ಲದೆ ಡಾ. ಜಿ ಪರಮೇಶ್ವರ್ ಅವರು ಆಡಳಿತ ಮಾಡಿದ್ದಾರೆ. ಅವರ ಗೌರವಕ್ಕೆ ಧಕ್ಕೆ ತಂದರೆ ನಾವು ಸುಮ್ಮನಿರುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಡಾ. ಜಿ ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಮುಳ್ಳೂರು ಮಹೇಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago