ಮೈಸೂರು

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮೇಲೆ ಇಡಿ ದಾಳಿಗೆ ಡಾ.ಜಿ. ಪರಮೇಶ್ವರ್ ಯುವ ಸೈನ್ಯ ಖಂಡನೆ

ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರಾದ ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ಉದ್ದೇಶಪೂರ್ವಕವಾಗಿ ದಾಳಿ ಮಾಡಲಾಗಿದ್ದು, ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ಪದೇಪದೇ ಇಡಿ ದಾಳಿ ನಡೆಸುತ್ತಿರುವುದು ಖಂಡನೀಯ. ಮುಂದಿನ ಮುಖ್ಯಮಂತ್ರಿಗಳು ಆಗುತ್ತಾರೆ ಅದಕ್ಕೆ ಅವರನ್ನು ಕುಗ್ಗಿಸಲು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಅವರು ಕುಗ್ಗುವುದಿಲ್ಲ. ಇಡಿ ದಾಳಿಯು ರಾಜಕೀಯ ಪ್ರೇರಿತವಾಗಿದೆ. ಬೇರೆಬೇರೆ ನಾಯಕರ ಶಿಕ್ಷಣ ಸಂಸ್ಥೆಗಳು ಇದ್ದರು, ಅವರ ಮೇಲೆ ದಾಳಿ ಆಗುತ್ತಿಲ್ಲ. 2019ರಲ್ಲಿಯೂ ಪರಮೇಶ್ವರ್ ರವರ ಮೇಲೆ ಇಡಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಅವರಿಗೆ ಏನು ಸಿಗಲಿಲ್ಲ. ಅವರನ್ನೇ ಯಾಕೇ ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುತ್ತಿರುವುದನ್ನು ನೋಡಿದರೆ ನಮಗೆ ಅನುಮಾನ ವ್ಯಕ್ತವಾಗುತ್ತಿದೆ.

ಕಳೆದ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮೇಲೆ ನೀಡಿ ಇಡಿ ದಾಳಿ ನಡೆಸಿತ್ತು. ಹಿರಿಯ ದಲಿತ ರಾಜ್ಯ ನಾಯಕರು ಹಾಗೂ ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಅವರ ಗೌರವಕ್ಕೆ ಧಕ್ಕೆ ತರಲಾಗುತ್ತಿದೆ ಇದನ್ನು ಸಮುದಾಯ ತೀರವಾಗಿ ಖಂಡಿಸುತ್ತದೆ. ಯಾವುದೇ ರೀತಿ ಕಪ್ಪು ಚುಕ್ಕೆ ಇಲ್ಲದೆ ಡಾ. ಜಿ ಪರಮೇಶ್ವರ್ ಅವರು ಆಡಳಿತ ಮಾಡಿದ್ದಾರೆ. ಅವರ ಗೌರವಕ್ಕೆ ಧಕ್ಕೆ ತಂದರೆ ನಾವು ಸುಮ್ಮನಿರುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಡಾ. ಜಿ ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಮುಳ್ಳೂರು ಮಹೇಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago