ಮೈಸೂರು: ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಮಹಾರಾಷ್ಟ್ರ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಿ, ಮರಾಠಿ ಪುಂಡರಿಗೆ ಧಿಕ್ಕಾರ , ಬೇಕೇ ಬೇಕು ನ್ಯಾಯ ಬೇಕು, ಕನ್ನಡ ವಿರೋಧಿಗಳಿಗೆ ಧಿಕ್ಕಾರ, ಎಂಇಎಸ್ ಪುಂಡರಿಗೆ ಧಿಕ್ಕಾರ, ಕನ್ನಡ ವಿರೋಧಿಗಳಿಗೆ ಧಿಕ್ಕಾರ, ಬೆಳಗಾವಿ ರಾಜಕಾರಣಿಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಬಿ.ರಾಜಶೇಖರ್ ಮಾತನಾಡಿ, ರಾಜ್ಯದಲ್ಲಿ ಬಹಳಷ್ಟು ಮಂದಿ ಮರಾಠಿಗಳು ಉದ್ಯಮ ನಡೆಸುತ್ತಿದ್ದಾರೆ. ಅವರಿಗೆ ಈವರೆಗೂ ಯಾವುದೇ ತೊಂದರೆಯಾಗಿಲ್ಲ. ಮರಾಠಿಗರು ಏಕೆ ಈ ರೀತಿ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದೀರಾ. ನಾವಿಬ್ಬರು ಅಣ್ಣ-ತಮ್ಮಂದಿರರಂತೆ ಸೌಹಾರ್ದತೆಯಿಂದ ಇರಬೇಕು. ಈ ರೀತಿಯ ಘಟನೆ ಮತ್ತೆ ಮರುಕಳಿಸಿದರೆ, ಮಹಾರಾಷ್ಟ್ರ ಬಸ್ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೆಳಗಾವಿ ಭಾಗದಲ್ಲಿರುವ ರಾಜಕಾರಣಿಗಳಿಂದ ಕನ್ನಡಿಗರಿಗೆ ಈ ಸ್ಥಿತಿ ನಿರ್ಮಾಣವಾಗಿದ್ದು, ಕನ್ನಡಿಗರ ಮತದಿಂದ ಗೆದ್ದು, ಮರಾಠಿಯಲ್ಲಿ ಭಾಷಣ ಮಾಡುವ ಮೂಲಕ ಅವರನ್ನು ಪ್ರಚೋದನೆಗೊಳಿಸುತ್ತಿದೀರಾ, ಅಧಿಕಾರಿಗಳು ಅದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಮತ್ತೊಂದೆಡೆ ಮರಾಠ ಪ್ರಾಧಿಕಾರವನ್ನು ಮಾಡಿದ್ದಾರೆ. ಅದನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಹಿರಿಯ ಸಾಹಿತಿ ಬನ್ನೂರು ಕೆ.ರಾಜು ಮಾತನಾಡಿ, ಮರಾಠಿಗರ ದೌರ್ಜನ್ಯ ಇಂದಿನಿಂದ ಆರಂಭವಾಗಿಲ್ಲ. ಏಕೀಕರಣವಾಗುವುದಕ್ಕಿಂತ ಮುಂಚಿನಿಂದ ಇದೆ. ಈ ಬಗ್ಗೆ ಕರ್ನಾಟಕ ಏಕೀಕರಣವಾಗುವ ಮೊದಲ್ಲೇ ಆಲೂರೂ ವೆಂಕಟರಾಯರು ಮರಾಠಿಗರ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಿದರು. ಇಂದಿನ ಪರಿಸ್ಥಿತಿಗೆ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹಾಜನ್ ಆಯೋಗದ ವರದಿ ಪ್ರಕಾರ ಬೆಳಗಾವಿ ನಮ್ಮ ಕರ್ನಾಟಕದ ಅವಿಭಾಜದ ಅಂಗವಾಗಿದೆ. ರಾಜಕಾರಣಿಗಳು ಗಮನ ಹರಿಸಲಿಲ್ಲವಾದರೆ ಬೆಳಗಾವಿ ಕಳೆದುಕೊಳ್ಳಬೇಕಾಗುತ್ತದೆ. ಕನ್ನಡಿಗರಿಗೆ ಕರ್ನಾಟಕದಲ್ಲಿ ರಕ್ಷಣೆ ಇಲ್ಲವಾದರೆ, ಹೇಗೆ ರಾಜಕಾರಣಿಗಳು ಬೆಳಗಾವಿಯನ್ನು ಮಾರಿಕೊಳ್ಳುತ್ತಾರೆ. ಕನ್ನಡದ ಬಗ್ಗೆ ಧ್ವನಿ ಎತ್ತುವವರು ಯಾರು ಇಲ್ಲ. ರಾಜಕಾರಣಿಗಳಿಂದ ಹೊಡೆದು ಆಳುವ ಕೆಲಸ ನೆಡೆಯುತ್ತಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಡಿಪಿಕೆ ಪರಮೇಶ್, ಸಿಂಧ್ಧುವಳ್ಳಿ ಶಿವಕುಮಾರ್, ನಂಜುಂಡ, ಅನುರಾಜ್ಗೌಡ, ಮಂಜುಳ, ಕೃಷ್ಣಪ್ಪ, ರಾಧಕೃಷ್ಣ, ಭಾಗ್ಯ, ಕಿರಣ್, ರಾಮು, ಮಹದೇವಸ್ವಾಮಿ, ಗಿರೀಶ್, ರಾಜು, ಶ್ರೀನಿವಾಸ್, ವಿಷ್ಣು ಮತ್ತಿತರರು ಉಪಸ್ಥಿತರಿದ್ದರು.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…