ಮೈಸೂರು: ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಮಹಾರಾಷ್ಟ್ರ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಿ, ಮರಾಠಿ ಪುಂಡರಿಗೆ ಧಿಕ್ಕಾರ , ಬೇಕೇ ಬೇಕು ನ್ಯಾಯ ಬೇಕು, ಕನ್ನಡ ವಿರೋಧಿಗಳಿಗೆ ಧಿಕ್ಕಾರ, ಎಂಇಎಸ್ ಪುಂಡರಿಗೆ ಧಿಕ್ಕಾರ, ಕನ್ನಡ ವಿರೋಧಿಗಳಿಗೆ ಧಿಕ್ಕಾರ, ಬೆಳಗಾವಿ ರಾಜಕಾರಣಿಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಬಿ.ರಾಜಶೇಖರ್ ಮಾತನಾಡಿ, ರಾಜ್ಯದಲ್ಲಿ ಬಹಳಷ್ಟು ಮಂದಿ ಮರಾಠಿಗಳು ಉದ್ಯಮ ನಡೆಸುತ್ತಿದ್ದಾರೆ. ಅವರಿಗೆ ಈವರೆಗೂ ಯಾವುದೇ ತೊಂದರೆಯಾಗಿಲ್ಲ. ಮರಾಠಿಗರು ಏಕೆ ಈ ರೀತಿ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದೀರಾ. ನಾವಿಬ್ಬರು ಅಣ್ಣ-ತಮ್ಮಂದಿರರಂತೆ ಸೌಹಾರ್ದತೆಯಿಂದ ಇರಬೇಕು. ಈ ರೀತಿಯ ಘಟನೆ ಮತ್ತೆ ಮರುಕಳಿಸಿದರೆ, ಮಹಾರಾಷ್ಟ್ರ ಬಸ್ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೆಳಗಾವಿ ಭಾಗದಲ್ಲಿರುವ ರಾಜಕಾರಣಿಗಳಿಂದ ಕನ್ನಡಿಗರಿಗೆ ಈ ಸ್ಥಿತಿ ನಿರ್ಮಾಣವಾಗಿದ್ದು, ಕನ್ನಡಿಗರ ಮತದಿಂದ ಗೆದ್ದು, ಮರಾಠಿಯಲ್ಲಿ ಭಾಷಣ ಮಾಡುವ ಮೂಲಕ ಅವರನ್ನು ಪ್ರಚೋದನೆಗೊಳಿಸುತ್ತಿದೀರಾ, ಅಧಿಕಾರಿಗಳು ಅದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಮತ್ತೊಂದೆಡೆ ಮರಾಠ ಪ್ರಾಧಿಕಾರವನ್ನು ಮಾಡಿದ್ದಾರೆ. ಅದನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಹಿರಿಯ ಸಾಹಿತಿ ಬನ್ನೂರು ಕೆ.ರಾಜು ಮಾತನಾಡಿ, ಮರಾಠಿಗರ ದೌರ್ಜನ್ಯ ಇಂದಿನಿಂದ ಆರಂಭವಾಗಿಲ್ಲ. ಏಕೀಕರಣವಾಗುವುದಕ್ಕಿಂತ ಮುಂಚಿನಿಂದ ಇದೆ. ಈ ಬಗ್ಗೆ ಕರ್ನಾಟಕ ಏಕೀಕರಣವಾಗುವ ಮೊದಲ್ಲೇ ಆಲೂರೂ ವೆಂಕಟರಾಯರು ಮರಾಠಿಗರ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಿದರು. ಇಂದಿನ ಪರಿಸ್ಥಿತಿಗೆ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹಾಜನ್ ಆಯೋಗದ ವರದಿ ಪ್ರಕಾರ ಬೆಳಗಾವಿ ನಮ್ಮ ಕರ್ನಾಟಕದ ಅವಿಭಾಜದ ಅಂಗವಾಗಿದೆ. ರಾಜಕಾರಣಿಗಳು ಗಮನ ಹರಿಸಲಿಲ್ಲವಾದರೆ ಬೆಳಗಾವಿ ಕಳೆದುಕೊಳ್ಳಬೇಕಾಗುತ್ತದೆ. ಕನ್ನಡಿಗರಿಗೆ ಕರ್ನಾಟಕದಲ್ಲಿ ರಕ್ಷಣೆ ಇಲ್ಲವಾದರೆ, ಹೇಗೆ ರಾಜಕಾರಣಿಗಳು ಬೆಳಗಾವಿಯನ್ನು ಮಾರಿಕೊಳ್ಳುತ್ತಾರೆ. ಕನ್ನಡದ ಬಗ್ಗೆ ಧ್ವನಿ ಎತ್ತುವವರು ಯಾರು ಇಲ್ಲ. ರಾಜಕಾರಣಿಗಳಿಂದ ಹೊಡೆದು ಆಳುವ ಕೆಲಸ ನೆಡೆಯುತ್ತಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಡಿಪಿಕೆ ಪರಮೇಶ್, ಸಿಂಧ್ಧುವಳ್ಳಿ ಶಿವಕುಮಾರ್, ನಂಜುಂಡ, ಅನುರಾಜ್ಗೌಡ, ಮಂಜುಳ, ಕೃಷ್ಣಪ್ಪ, ರಾಧಕೃಷ್ಣ, ಭಾಗ್ಯ, ಕಿರಣ್, ರಾಮು, ಮಹದೇವಸ್ವಾಮಿ, ಗಿರೀಶ್, ರಾಜು, ಶ್ರೀನಿವಾಸ್, ವಿಷ್ಣು ಮತ್ತಿತರರು ಉಪಸ್ಥಿತರಿದ್ದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…