Opposition to college relocation: Mahajana College students protest
ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಯಾವುದೋ ಉದ್ದೇಶದಿಂದ ನಮ್ಮನ್ನು ಕೆಆರ್ಎಸ್ ರಸ್ತೆಯ ಕಟ್ಟಡಕ್ಕೆ ವರ್ಗಾವಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ಸುತ್ತಮುತ್ತಲ ಬಡಾವಣೆಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುತ್ತಾರೆ. ಹೊರಗಿನಿಂದ ಬಂದವರು ಕಾಲೇಜು ಆಸುಪಾಸಿನಲ್ಲಿ ಬಾಡಿಗೆ ಕೊಠಡಿ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಿರುವಾಗ ಏಕಾಏಕಿ ನಗರದ ಹೊರವಲಯದಲ್ಲಿನ ಕಟ್ಟಡಕ್ಕೆ ಕಾಲೇಜು ವರ್ಗಾವಣೆ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಒಂದೊಂದು ವಿದ್ಯಾರ್ಥಿಯಿಂದ ಒಂದೊಂದು ರೀತಿಯ ಶುಲ್ಕ ಪಡೆಯಲಾಗಿದೆ. ಪಾಠ ಮಾಡುವಾಗ ಕನ್ನಡದಲ್ಲಿಯೂ ಅರ್ಥ ಹೇಳಿ ಎಂದರೆ ಹೇಳುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಯಾವುದೇ ಸುಧಾರಣೆ ಮಾಡುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕಟ್ಟ ಪರಿಣಾಮ ಉಂಟು ಮಾಡುತ್ತಿದೆ ಎಂದು ದೂರಿದರು.
ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಒಟ್ಟಾಗಿ ಪ್ರಾಂಶುಪಾಲರ ಬಳಿಗೆ ತೆರಳಿ ತಮ್ಮ ಅಹವಾಲನ್ನು ಹೇಳಿಕೊಂಡರು. ಅಲ್ಲದೇ ಅವುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…