Opposition to college relocation: Mahajana College students protest
ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಯಾವುದೋ ಉದ್ದೇಶದಿಂದ ನಮ್ಮನ್ನು ಕೆಆರ್ಎಸ್ ರಸ್ತೆಯ ಕಟ್ಟಡಕ್ಕೆ ವರ್ಗಾವಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ಸುತ್ತಮುತ್ತಲ ಬಡಾವಣೆಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುತ್ತಾರೆ. ಹೊರಗಿನಿಂದ ಬಂದವರು ಕಾಲೇಜು ಆಸುಪಾಸಿನಲ್ಲಿ ಬಾಡಿಗೆ ಕೊಠಡಿ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಿರುವಾಗ ಏಕಾಏಕಿ ನಗರದ ಹೊರವಲಯದಲ್ಲಿನ ಕಟ್ಟಡಕ್ಕೆ ಕಾಲೇಜು ವರ್ಗಾವಣೆ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಒಂದೊಂದು ವಿದ್ಯಾರ್ಥಿಯಿಂದ ಒಂದೊಂದು ರೀತಿಯ ಶುಲ್ಕ ಪಡೆಯಲಾಗಿದೆ. ಪಾಠ ಮಾಡುವಾಗ ಕನ್ನಡದಲ್ಲಿಯೂ ಅರ್ಥ ಹೇಳಿ ಎಂದರೆ ಹೇಳುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಯಾವುದೇ ಸುಧಾರಣೆ ಮಾಡುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕಟ್ಟ ಪರಿಣಾಮ ಉಂಟು ಮಾಡುತ್ತಿದೆ ಎಂದು ದೂರಿದರು.
ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಒಟ್ಟಾಗಿ ಪ್ರಾಂಶುಪಾಲರ ಬಳಿಗೆ ತೆರಳಿ ತಮ್ಮ ಅಹವಾಲನ್ನು ಹೇಳಿಕೊಂಡರು. ಅಲ್ಲದೇ ಅವುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…