Opposition to college relocation: Mahajana College students protest
ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಯಾವುದೋ ಉದ್ದೇಶದಿಂದ ನಮ್ಮನ್ನು ಕೆಆರ್ಎಸ್ ರಸ್ತೆಯ ಕಟ್ಟಡಕ್ಕೆ ವರ್ಗಾವಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ಸುತ್ತಮುತ್ತಲ ಬಡಾವಣೆಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುತ್ತಾರೆ. ಹೊರಗಿನಿಂದ ಬಂದವರು ಕಾಲೇಜು ಆಸುಪಾಸಿನಲ್ಲಿ ಬಾಡಿಗೆ ಕೊಠಡಿ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಿರುವಾಗ ಏಕಾಏಕಿ ನಗರದ ಹೊರವಲಯದಲ್ಲಿನ ಕಟ್ಟಡಕ್ಕೆ ಕಾಲೇಜು ವರ್ಗಾವಣೆ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಒಂದೊಂದು ವಿದ್ಯಾರ್ಥಿಯಿಂದ ಒಂದೊಂದು ರೀತಿಯ ಶುಲ್ಕ ಪಡೆಯಲಾಗಿದೆ. ಪಾಠ ಮಾಡುವಾಗ ಕನ್ನಡದಲ್ಲಿಯೂ ಅರ್ಥ ಹೇಳಿ ಎಂದರೆ ಹೇಳುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಯಾವುದೇ ಸುಧಾರಣೆ ಮಾಡುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕಟ್ಟ ಪರಿಣಾಮ ಉಂಟು ಮಾಡುತ್ತಿದೆ ಎಂದು ದೂರಿದರು.
ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಒಟ್ಟಾಗಿ ಪ್ರಾಂಶುಪಾಲರ ಬಳಿಗೆ ತೆರಳಿ ತಮ್ಮ ಅಹವಾಲನ್ನು ಹೇಳಿಕೊಂಡರು. ಅಲ್ಲದೇ ಅವುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…