Opposition to college relocation: Mahajana College students protest
ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಯಾವುದೋ ಉದ್ದೇಶದಿಂದ ನಮ್ಮನ್ನು ಕೆಆರ್ಎಸ್ ರಸ್ತೆಯ ಕಟ್ಟಡಕ್ಕೆ ವರ್ಗಾವಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ಸುತ್ತಮುತ್ತಲ ಬಡಾವಣೆಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುತ್ತಾರೆ. ಹೊರಗಿನಿಂದ ಬಂದವರು ಕಾಲೇಜು ಆಸುಪಾಸಿನಲ್ಲಿ ಬಾಡಿಗೆ ಕೊಠಡಿ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಿರುವಾಗ ಏಕಾಏಕಿ ನಗರದ ಹೊರವಲಯದಲ್ಲಿನ ಕಟ್ಟಡಕ್ಕೆ ಕಾಲೇಜು ವರ್ಗಾವಣೆ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಒಂದೊಂದು ವಿದ್ಯಾರ್ಥಿಯಿಂದ ಒಂದೊಂದು ರೀತಿಯ ಶುಲ್ಕ ಪಡೆಯಲಾಗಿದೆ. ಪಾಠ ಮಾಡುವಾಗ ಕನ್ನಡದಲ್ಲಿಯೂ ಅರ್ಥ ಹೇಳಿ ಎಂದರೆ ಹೇಳುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಯಾವುದೇ ಸುಧಾರಣೆ ಮಾಡುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕಟ್ಟ ಪರಿಣಾಮ ಉಂಟು ಮಾಡುತ್ತಿದೆ ಎಂದು ದೂರಿದರು.
ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಒಟ್ಟಾಗಿ ಪ್ರಾಂಶುಪಾಲರ ಬಳಿಗೆ ತೆರಳಿ ತಮ್ಮ ಅಹವಾಲನ್ನು ಹೇಳಿಕೊಂಡರು. ಅಲ್ಲದೇ ಅವುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…