ಮೈಸೂರು

ಕಾಲೇಜು ಸ್ಥಳಾಂತರಕ್ಕೆ ವಿರೋಧ : ಮಹಾಜನ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಯಾವುದೋ ಉದ್ದೇಶದಿಂದ ನಮ್ಮನ್ನು ಕೆಆರ್‌ಎಸ್ ರಸ್ತೆಯ ಕಟ್ಟಡಕ್ಕೆ ವರ್ಗಾವಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.

ಸುತ್ತಮುತ್ತಲ ಬಡಾವಣೆಗಳಿಂದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುತ್ತಾರೆ. ಹೊರಗಿನಿಂದ ಬಂದವರು ಕಾಲೇಜು ಆಸುಪಾಸಿನಲ್ಲಿ ಬಾಡಿಗೆ ಕೊಠಡಿ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಿರುವಾಗ ಏಕಾಏಕಿ ನಗರದ ಹೊರವಲಯದಲ್ಲಿನ ಕಟ್ಟಡಕ್ಕೆ ಕಾಲೇಜು ವರ್ಗಾವಣೆ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಲೇಜಿನಲ್ಲಿ ಒಂದೊಂದು ವಿದ್ಯಾರ್ಥಿಯಿಂದ ಒಂದೊಂದು ರೀತಿಯ ಶುಲ್ಕ ಪಡೆಯಲಾಗಿದೆ. ಪಾಠ ಮಾಡುವಾಗ ಕನ್ನಡದಲ್ಲಿಯೂ ಅರ್ಥ ಹೇಳಿ ಎಂದರೆ ಹೇಳುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಯಾವುದೇ ಸುಧಾರಣೆ ಮಾಡುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕಟ್ಟ ಪರಿಣಾಮ ಉಂಟು ಮಾಡುತ್ತಿದೆ ಎಂದು ದೂರಿದರು.

ಇದೇ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಒಟ್ಟಾಗಿ ಪ್ರಾಂಶುಪಾಲರ ಬಳಿಗೆ ತೆರಳಿ ತಮ್ಮ ಅಹವಾಲನ್ನು ಹೇಳಿಕೊಂಡರು. ಅಲ್ಲದೇ ಅವುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

11 mins ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

18 mins ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

2 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

2 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

3 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

4 hours ago