ಮೈಸೂರು

ಕೆ.ಆರ್‌ ನಗರ | ಮದ್ಯದಂಗಡಿ ತೆರೆಯಲು ವಿರೋಧ, ಮಹಿಳೆಯರ ಪ್ರತಿಭಟನೆ

ಕೆ.ಆರ್ ನಗರ : ತಾಲೂಕಿನ ಗುಮ್ಮನಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮದ್ಯದಂಗಡಿ (ಎಂಎಸ್‌ಐಎಲ್‌) ತೆರೆಯಲು ಬಿಡುವುದಿಲ್ಲ ಎಂದು ಮಹಿಳಾ ಸಂಘಗಳ ಸದಸ್ಯರು ಮತ್ತು ಗ್ರಾಮದ ಯಜಮಾನರು ಮಧ್ಯದ ಅಂಗಡಿಯ ನಾಮಫಲಕವನ್ನು ಕಿತ್ತು ಸುಡುವ ಮೂಲಕ ಪ್ರತಿಭಟಿಸಿದರು.

ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಮಹಿಳೆಯರು, ಸಾಲಿಗ್ರಾಮ ತಾಲೂಕಿನ ಗುಮ್ಮನಲ್ಲಿ ಗ್ರಾಮದಲ್ಲಿ ನೆನ್ನೆ ರಾತ್ರಿ ಸರ್ಕಾರಿ ಸೌಮ್ಯದ ಮಧ್ಯದ ( ಎಂ ಎಸ್ ಐ ಎಲ್ ) ಅಂಗಡಿಯ ಸನ್ನದ್ದುದಾರ ಮಂಜುನಾಥ್ ಸೇರಿದಂತೆ ಅಧಿಕಾರಿಗಳು ಬಾಗಿಲು ಅಂಗಡಿಯ ತೆರೆಯಲು ಬಂದಾಗ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.

ರಾತ್ರಿ ಪೂರ್ಣ ಸ್ಥಳದಲ್ಲಿ ಮುಕ್ಕಮ್ ಹೊಡಿ ಕಾದಿದ್ದಲ್ಲದೆ ಬೆಳಿಗ್ಗೆಯಿಂದಲೇ ಗ್ರಾಮದ ಮಹಿಳಾ ಸಂಘಗಳು ಮತ್ತು ಗ್ರಾಮಸ್ಥರು ನೂರಾರು ಜನ ಅಂಗಡಿಯ ಮುಂಭಾಗ ಸಭೆ ಸೇರಿ ಎಲ್ಲರೂ ಒಂದಾಗಿ ನಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಮಧ್ಯದ ಅಂಗಡಿಯನ್ನು ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟಿಸಿದರು.

ಬಳಿಕ ಮಾತನಾಡಿದ ಮಹಿಳಾ ಸಂಘದ ಸದಸ್ಯರು, ಸರ್ಕಾರ ಮಹಿಳೆಯರಿಗಾಗಿ ಗ್ರಾಮಾಂತರ ಪ್ರದೇಶದಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸಗಳನ್ನು ಮಾಡುತ್ತಿದ್ದರು ನಮ್ಮ ಗ್ರಾಮ ಅತ್ಯಂತ ಹಿಂದುಳಿದ ಗ್ರಾಮವಾಗಿದೆ. ಅನಕ್ಷರಸ್ಥರು ಮತ್ತು ಬಡವರು ಹೆಚ್ಚು ವಾಸವಿರುವ ನಮ್ಮ ಗ್ರಾಮದಲ್ಲಿ ಉದ್ಯೋಗಕ್ಕಾಗಿ ಮತ್ತು ಕೂಲಿಗಾಗಿ ಹೊರ ಗ್ರಾಮಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ ಕೂಲಿ ನಾಲಿ ಮಾಡಿ ಸಂಪಾದನೆ ಮಾಡಿದ ಹಣವನ್ನು ಈ ಮಧ್ಯದ ಅಂಗಡಿಗೆ ಹಾಕಿದರೆ ನಮ್ಮ ಗತಿಯೇನು? ಆದ್ದರಿಂದ ನಮ್ಮ ಗ್ರಾಮಕ್ಕೆ ಮಧ್ಯದ ಅಂಗಡಿ ಯಾವುದೇ ಕಾರಣಕ್ಕೂ ಬೇಡ ಎಂದು ಇಲಾಖೆ ಮತ್ತು ಸರ್ಕಾರವನ್ನು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

1 hour ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

1 hour ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

2 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

2 hours ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

2 hours ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

2 hours ago