opposition to open liquor store
ಕೆ.ಆರ್ ನಗರ : ತಾಲೂಕಿನ ಗುಮ್ಮನಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮದ್ಯದಂಗಡಿ (ಎಂಎಸ್ಐಎಲ್) ತೆರೆಯಲು ಬಿಡುವುದಿಲ್ಲ ಎಂದು ಮಹಿಳಾ ಸಂಘಗಳ ಸದಸ್ಯರು ಮತ್ತು ಗ್ರಾಮದ ಯಜಮಾನರು ಮಧ್ಯದ ಅಂಗಡಿಯ ನಾಮಫಲಕವನ್ನು ಕಿತ್ತು ಸುಡುವ ಮೂಲಕ ಪ್ರತಿಭಟಿಸಿದರು.
ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಮಹಿಳೆಯರು, ಸಾಲಿಗ್ರಾಮ ತಾಲೂಕಿನ ಗುಮ್ಮನಲ್ಲಿ ಗ್ರಾಮದಲ್ಲಿ ನೆನ್ನೆ ರಾತ್ರಿ ಸರ್ಕಾರಿ ಸೌಮ್ಯದ ಮಧ್ಯದ ( ಎಂ ಎಸ್ ಐ ಎಲ್ ) ಅಂಗಡಿಯ ಸನ್ನದ್ದುದಾರ ಮಂಜುನಾಥ್ ಸೇರಿದಂತೆ ಅಧಿಕಾರಿಗಳು ಬಾಗಿಲು ಅಂಗಡಿಯ ತೆರೆಯಲು ಬಂದಾಗ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.
ರಾತ್ರಿ ಪೂರ್ಣ ಸ್ಥಳದಲ್ಲಿ ಮುಕ್ಕಮ್ ಹೊಡಿ ಕಾದಿದ್ದಲ್ಲದೆ ಬೆಳಿಗ್ಗೆಯಿಂದಲೇ ಗ್ರಾಮದ ಮಹಿಳಾ ಸಂಘಗಳು ಮತ್ತು ಗ್ರಾಮಸ್ಥರು ನೂರಾರು ಜನ ಅಂಗಡಿಯ ಮುಂಭಾಗ ಸಭೆ ಸೇರಿ ಎಲ್ಲರೂ ಒಂದಾಗಿ ನಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಮಧ್ಯದ ಅಂಗಡಿಯನ್ನು ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟಿಸಿದರು.
ಬಳಿಕ ಮಾತನಾಡಿದ ಮಹಿಳಾ ಸಂಘದ ಸದಸ್ಯರು, ಸರ್ಕಾರ ಮಹಿಳೆಯರಿಗಾಗಿ ಗ್ರಾಮಾಂತರ ಪ್ರದೇಶದಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸಗಳನ್ನು ಮಾಡುತ್ತಿದ್ದರು ನಮ್ಮ ಗ್ರಾಮ ಅತ್ಯಂತ ಹಿಂದುಳಿದ ಗ್ರಾಮವಾಗಿದೆ. ಅನಕ್ಷರಸ್ಥರು ಮತ್ತು ಬಡವರು ಹೆಚ್ಚು ವಾಸವಿರುವ ನಮ್ಮ ಗ್ರಾಮದಲ್ಲಿ ಉದ್ಯೋಗಕ್ಕಾಗಿ ಮತ್ತು ಕೂಲಿಗಾಗಿ ಹೊರ ಗ್ರಾಮಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ ಕೂಲಿ ನಾಲಿ ಮಾಡಿ ಸಂಪಾದನೆ ಮಾಡಿದ ಹಣವನ್ನು ಈ ಮಧ್ಯದ ಅಂಗಡಿಗೆ ಹಾಕಿದರೆ ನಮ್ಮ ಗತಿಯೇನು? ಆದ್ದರಿಂದ ನಮ್ಮ ಗ್ರಾಮಕ್ಕೆ ಮಧ್ಯದ ಅಂಗಡಿ ಯಾವುದೇ ಕಾರಣಕ್ಕೂ ಬೇಡ ಎಂದು ಇಲಾಖೆ ಮತ್ತು ಸರ್ಕಾರವನ್ನು ಒತ್ತಾಯಿಸಿದರು.
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…
ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…