opposition to open liquor store
ಕೆ.ಆರ್ ನಗರ : ತಾಲೂಕಿನ ಗುಮ್ಮನಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮದ್ಯದಂಗಡಿ (ಎಂಎಸ್ಐಎಲ್) ತೆರೆಯಲು ಬಿಡುವುದಿಲ್ಲ ಎಂದು ಮಹಿಳಾ ಸಂಘಗಳ ಸದಸ್ಯರು ಮತ್ತು ಗ್ರಾಮದ ಯಜಮಾನರು ಮಧ್ಯದ ಅಂಗಡಿಯ ನಾಮಫಲಕವನ್ನು ಕಿತ್ತು ಸುಡುವ ಮೂಲಕ ಪ್ರತಿಭಟಿಸಿದರು.
ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಮಹಿಳೆಯರು, ಸಾಲಿಗ್ರಾಮ ತಾಲೂಕಿನ ಗುಮ್ಮನಲ್ಲಿ ಗ್ರಾಮದಲ್ಲಿ ನೆನ್ನೆ ರಾತ್ರಿ ಸರ್ಕಾರಿ ಸೌಮ್ಯದ ಮಧ್ಯದ ( ಎಂ ಎಸ್ ಐ ಎಲ್ ) ಅಂಗಡಿಯ ಸನ್ನದ್ದುದಾರ ಮಂಜುನಾಥ್ ಸೇರಿದಂತೆ ಅಧಿಕಾರಿಗಳು ಬಾಗಿಲು ಅಂಗಡಿಯ ತೆರೆಯಲು ಬಂದಾಗ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.
ರಾತ್ರಿ ಪೂರ್ಣ ಸ್ಥಳದಲ್ಲಿ ಮುಕ್ಕಮ್ ಹೊಡಿ ಕಾದಿದ್ದಲ್ಲದೆ ಬೆಳಿಗ್ಗೆಯಿಂದಲೇ ಗ್ರಾಮದ ಮಹಿಳಾ ಸಂಘಗಳು ಮತ್ತು ಗ್ರಾಮಸ್ಥರು ನೂರಾರು ಜನ ಅಂಗಡಿಯ ಮುಂಭಾಗ ಸಭೆ ಸೇರಿ ಎಲ್ಲರೂ ಒಂದಾಗಿ ನಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಮಧ್ಯದ ಅಂಗಡಿಯನ್ನು ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟಿಸಿದರು.
ಬಳಿಕ ಮಾತನಾಡಿದ ಮಹಿಳಾ ಸಂಘದ ಸದಸ್ಯರು, ಸರ್ಕಾರ ಮಹಿಳೆಯರಿಗಾಗಿ ಗ್ರಾಮಾಂತರ ಪ್ರದೇಶದಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸಗಳನ್ನು ಮಾಡುತ್ತಿದ್ದರು ನಮ್ಮ ಗ್ರಾಮ ಅತ್ಯಂತ ಹಿಂದುಳಿದ ಗ್ರಾಮವಾಗಿದೆ. ಅನಕ್ಷರಸ್ಥರು ಮತ್ತು ಬಡವರು ಹೆಚ್ಚು ವಾಸವಿರುವ ನಮ್ಮ ಗ್ರಾಮದಲ್ಲಿ ಉದ್ಯೋಗಕ್ಕಾಗಿ ಮತ್ತು ಕೂಲಿಗಾಗಿ ಹೊರ ಗ್ರಾಮಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ ಕೂಲಿ ನಾಲಿ ಮಾಡಿ ಸಂಪಾದನೆ ಮಾಡಿದ ಹಣವನ್ನು ಈ ಮಧ್ಯದ ಅಂಗಡಿಗೆ ಹಾಕಿದರೆ ನಮ್ಮ ಗತಿಯೇನು? ಆದ್ದರಿಂದ ನಮ್ಮ ಗ್ರಾಮಕ್ಕೆ ಮಧ್ಯದ ಅಂಗಡಿ ಯಾವುದೇ ಕಾರಣಕ್ಕೂ ಬೇಡ ಎಂದು ಇಲಾಖೆ ಮತ್ತು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…