ಮೈಸೂರು

ಹಳೆ ಮರ ಕಡಿಯುವ ಪಾಲಿಕೆ ಯತ್ನಕ್ಕೆ ವಿರೋಧ

ಮೈಸೂರು: ನಗರದ ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿರುವ ನೂರಕ್ಕೂ ಹೆಚ್ಚು ವರ್ಷದ ಹಳೆಯ ಮರದ ಸುತ್ತ ಇದ್ದ ಕಟ್ಟೆ ದುರಸ್ತಿಯ ನೆಪದಲ್ಲಿ ಮರವನ್ನೇ ಕಡಿಯಲು ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ಪರಿಸರ ಪ್ರೇಮಿಗಳು ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕತ್ತರಿಸಿದ ಮರದ ಬೇರನ್ನು ಹಿಡಿದ ಪ್ರತಿಭಟನಾಕಾರರು, ನಗರಪಾಲಿಕೆ ಅಽಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್‌ಕುಮಾರ್ ಮಾತನಾಡಿ, ಅಭಿವೃದ್ಧಿ ನೆಪದಲ್ಲಿ ಇತಿಹಾಸವಿರುವ ಬೃಹದಾಕಾರದ ಮರದ ಬುಡಕ್ಕೆ ಕೊಡಲಿ ಪೆಟ್ಟು ನೀಡಿರುವುದು ಅತ್ಯಂತ ಬೇಸರದ ಸಂಗತಿ. ಈ ಬಗ್ಗೆ ಕೇಳಲು ಹೋದರೆ ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಇದನ್ನು ಪಾರಂಪರಿಕ ವೃಕ್ಷ ಎಂದು ಘೋಷಿಸಬೇಕು. ಅನಾವಶ್ಯಕ ಕಾಮಗಾರಿಗಳನ್ನು ಕೈಬಿಟ್ಟು ಮರಗಳ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಜೀವಧಾರ ರಕ್ತ ನಿಧಿ ಕೇಂದ್ರದ ಗಿರೀಶ್, ಯುವ ಮುಖಂಡರಾದ ಹರೀಶ್‌ಗೌಡ, ಮಂಜುನಾಥ್ ಗೌಡ , ಸಂದೇಶ್, ರವಿಚಂದ್ರ, ಎಸ್.ಎನ್.ರಾಜೇಶ್, ನೀತು, ಸಂತೋಷ್ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

8 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

8 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

11 hours ago