ಮೈಸೂರು: 2024-25 ನೇ ಸಾಲಿನ ಜಲವರ್ಷದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯು ಪ್ರಾರಂಭವಾಗಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಬರುತ್ತಿದೆ. ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮುಖಾಂತರ ಜನ ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೆರೆ ಕಟ್ಟೆಗಳಿಗೆ ಜುಲೈ 10 ರಿಂದ 25 ರವರೆಗೆ ನೀರು ಹರಿಸಲು ಉದ್ದೇಶಿಸಲಾಗಿದೆ.
ಕಬಿನಿ ಜಲಾಶಯದ ವ್ಯಾಪ್ತಿಗೆ ಬರುವ ಅಚ್ಚುಕಟ್ಟುದಾರರು ನೀರಾವರಿ ಅಧಿಕಾರಿಗಳೊಡನೆ ಸಹಕರಿಸಿ ಕೆರೆ ಕಟ್ಟೆಗಳಿಗೆ ಕುಡಿಯುವ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಮಾತ್ರ ನೀರನ್ನು ಬಳಸಬೇಕು. ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣವನ್ನು ಆಧರಿಸಿ ಅಚ್ಚುಕಟ್ಟು ಪ್ರದೇಶಕ್ಕೆ 2024-25 ನೇ ಸಾಲಿನ ಖಾರೀಪ್ ಬೆಳೆಗಳಿಗೆ ನಾಲೆಗಳ ಮುಖೇನ ನೀರು ಬಿಡುವ ಬಗ್ಗೆ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದು ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಮತ್ತು ವರಣಾ ನಾಲಾ ವೃತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…