ಮೈಸೂರು: 2024-25 ನೇ ಸಾಲಿನ ಜಲವರ್ಷದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯು ಪ್ರಾರಂಭವಾಗಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಬರುತ್ತಿದೆ. ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮುಖಾಂತರ ಜನ ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೆರೆ ಕಟ್ಟೆಗಳಿಗೆ ಜುಲೈ 10 ರಿಂದ 25 ರವರೆಗೆ ನೀರು ಹರಿಸಲು ಉದ್ದೇಶಿಸಲಾಗಿದೆ.
ಕಬಿನಿ ಜಲಾಶಯದ ವ್ಯಾಪ್ತಿಗೆ ಬರುವ ಅಚ್ಚುಕಟ್ಟುದಾರರು ನೀರಾವರಿ ಅಧಿಕಾರಿಗಳೊಡನೆ ಸಹಕರಿಸಿ ಕೆರೆ ಕಟ್ಟೆಗಳಿಗೆ ಕುಡಿಯುವ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಮಾತ್ರ ನೀರನ್ನು ಬಳಸಬೇಕು. ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣವನ್ನು ಆಧರಿಸಿ ಅಚ್ಚುಕಟ್ಟು ಪ್ರದೇಶಕ್ಕೆ 2024-25 ನೇ ಸಾಲಿನ ಖಾರೀಪ್ ಬೆಳೆಗಳಿಗೆ ನಾಲೆಗಳ ಮುಖೇನ ನೀರು ಬಿಡುವ ಬಗ್ಗೆ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದು ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಮತ್ತು ವರಣಾ ನಾಲಾ ವೃತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…