ಮೈಸೂರು

ಆದಿವಾಸಿ ಮಕ್ಕಳಿಗಾಗಿ ಬೇಸಿಗೆ ಶಿಬಿರ ಆಯೋಜನೆ

ಎಚ್.ಡಿ.ಕೋಟೆ: ಆದಿವಾಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ನಿಸರ್ಗ ಸಂಸ್ಥೆಯ ನಿರ್ದೇಶಕರಾದ ಪ್ರಭು ನಂಜುಂಡಯ್ಯ ಹೇಳಿದರು.

ಪಟ್ಟಣದ ನಿಸರ್ಗ ಸಂಸ್ಥೆಯಲ್ಲಿ ಆದಿವಾಸಿ ಚಿಗುರು ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಉಚಿತ ಬೇಸಿಗೆ ಶಿಬಿರ ಕಾರ್ದಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೇಸಿಗೆ ಶಿಬಿರದಲ್ಲಿ ಆದಿವಾಸಿಗಳ ಕಲೆ, ಸಂಸ್ಕೃತಿ, ಆಟೋಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಎಲ್ಲಾ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲವನ್ನು ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು.

ನಿಸರ್ಗ ಸಂಸ್ಥೆಯ ಕಾರ್ಕಯರ್ತ ಚಿಕ್ಕತಿಮ್ಮನಾಯಕ ಮಾತನಾಡಿ, ಮಕ್ಕಳಿಗೆ ಪ್ರಮುಖವಾಗಿ ನಾಲ್ಕು ಹಕ್ಕುಗಳಿವೆ. ಬದುಕುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹೊಂದುವ ಹಕ್ಕು, ವಿಕಾಸ ಹೊಂದುವ ಹಕ್ಕುಗಳಿದ್ದು, ಈ ಹಕ್ಕುಗಳಿಗೆ ಚ್ಯುತಿ ಬಂದಾಗ ಮಕ್ಕಳ ಸಹಾಯವಾಣಿ ೧೦೯೮ ಅಥವಾ ೧೧೨ ಸಂಖ್ಯೆಗೆ ಕರೆವಾಡುವಂತೆ ತಿಳಿಸಿದರು.

ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಆಶು-ಭಾಷಣ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ, ನೃತ್ಯ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುವಾನವನ್ನು ವಿತರಿಸಲಾಯಿತು.
ನಿಸರ್ಗ ಸಂಸ್ಥೆಯ ಕಾರ್ಯಕರ್ತರಾದ ದಿವ್ಯ, ಕನ್ಯಾಕುವಾರಿ, ನಿರ್ಮಲ, ಜ್ಯೋತಿ, ಚಿಗುರು ಶಾಲಾ ಶಿಕ್ಷಕಿಯರಾದ ಶ್ರುತಿ, ಮಹಾದೇವಿ, ಗೀತಾ, ಮೋನಿಕಾ, ೭೦ಕ್ಕೂ ಹೆಚ್ಚು ಆದಿವಾಸಿ ಚಿಗುರು ಶಾಲಾ ಮಕ್ಕಳು ಭಾಗಹಿಸಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…

2 mins ago

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

1 hour ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

1 hour ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

2 hours ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

2 hours ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

2 hours ago