ಮೈಸೂರು

ಆದಿವಾಸಿ ಮಕ್ಕಳಿಗಾಗಿ ಬೇಸಿಗೆ ಶಿಬಿರ ಆಯೋಜನೆ

ಎಚ್.ಡಿ.ಕೋಟೆ: ಆದಿವಾಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ನಿಸರ್ಗ ಸಂಸ್ಥೆಯ ನಿರ್ದೇಶಕರಾದ ಪ್ರಭು ನಂಜುಂಡಯ್ಯ ಹೇಳಿದರು.

ಪಟ್ಟಣದ ನಿಸರ್ಗ ಸಂಸ್ಥೆಯಲ್ಲಿ ಆದಿವಾಸಿ ಚಿಗುರು ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಉಚಿತ ಬೇಸಿಗೆ ಶಿಬಿರ ಕಾರ್ದಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೇಸಿಗೆ ಶಿಬಿರದಲ್ಲಿ ಆದಿವಾಸಿಗಳ ಕಲೆ, ಸಂಸ್ಕೃತಿ, ಆಟೋಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಎಲ್ಲಾ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲವನ್ನು ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು.

ನಿಸರ್ಗ ಸಂಸ್ಥೆಯ ಕಾರ್ಕಯರ್ತ ಚಿಕ್ಕತಿಮ್ಮನಾಯಕ ಮಾತನಾಡಿ, ಮಕ್ಕಳಿಗೆ ಪ್ರಮುಖವಾಗಿ ನಾಲ್ಕು ಹಕ್ಕುಗಳಿವೆ. ಬದುಕುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹೊಂದುವ ಹಕ್ಕು, ವಿಕಾಸ ಹೊಂದುವ ಹಕ್ಕುಗಳಿದ್ದು, ಈ ಹಕ್ಕುಗಳಿಗೆ ಚ್ಯುತಿ ಬಂದಾಗ ಮಕ್ಕಳ ಸಹಾಯವಾಣಿ ೧೦೯೮ ಅಥವಾ ೧೧೨ ಸಂಖ್ಯೆಗೆ ಕರೆವಾಡುವಂತೆ ತಿಳಿಸಿದರು.

ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಆಶು-ಭಾಷಣ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ, ನೃತ್ಯ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುವಾನವನ್ನು ವಿತರಿಸಲಾಯಿತು.
ನಿಸರ್ಗ ಸಂಸ್ಥೆಯ ಕಾರ್ಯಕರ್ತರಾದ ದಿವ್ಯ, ಕನ್ಯಾಕುವಾರಿ, ನಿರ್ಮಲ, ಜ್ಯೋತಿ, ಚಿಗುರು ಶಾಲಾ ಶಿಕ್ಷಕಿಯರಾದ ಶ್ರುತಿ, ಮಹಾದೇವಿ, ಗೀತಾ, ಮೋನಿಕಾ, ೭೦ಕ್ಕೂ ಹೆಚ್ಚು ಆದಿವಾಸಿ ಚಿಗುರು ಶಾಲಾ ಮಕ್ಕಳು ಭಾಗಹಿಸಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

4 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

4 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

5 hours ago