ಮೈಸೂರು

ಆರೋಗ್ಯ ಸೇವೆಗೆ ‘ನಮ್ಮ ಕ್ಲಿನಿಕ್’ : ಡಾ ಸುಧಾಕರ್

ಮೈಸೂರು  : ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ಸ್ವಂತ ಹಣ ಖರ್ಚು ಮಾಡುವುದನ್ನು ಕಡಿಮೆ ಮಾಡುವುದು ಹಾಗೂ ದ್ವಿತೀಯ, ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ, ಪ್ರಾಥಮಿಕ ಆರೋಗ್ಯ ಸೇವೆ ವಿಕೇಂದ್ರಿಕರಣ, ಸಾಂಕ್ರಾಮಿಕ ಕಾಯಿಲೆಗಳ ಕಣ್ಗಾವಲು ವ್ಯವಸ್ಥೆ ಬಲಪಡಿಸುವ ಮೂಲಕ ರೋಗಗಳು ಉಲ್ಬಣವಾಗಿ ದೊಡ್ಡ ಪ್ರಮಾಣದ ಗಂಡಾಂತರಕಾರಿ ಪರಿಸ್ಥಿತಿ ಎದುರಾಗುವುದನ್ನು ನಿಯಂತ್ರಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಜನರಿಗೆ ಅಗತ್ಯ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹೊಸದಾಗಿ ಆರು ‘ನಮ್ಮ ಕ್ಲಿನಿಕ್’ ಕಾರ್ಯಾರಂಭಿಸಲಿವೆ. ಆರೋಗ್ಯ ಸೇವೆಯಿಂದ ವಂಚಿತವಾಗಿರುವ ಕೊಳಗೇರಿ, ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ದುರ್ಬಲ ವರ್ಗದವರು ವಾಸಿಸುವ ಪ್ರದೇಶಗಳಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ ಮೂರು, ತಿ.ನರಸೀಪುರ, ಕೆ.ಆರ್.ನಗರ, ಎಚ್.ಡಿ. ಕೋಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಆರು ನಮ್ಮ ಕ್ಲಿನಿಕ್ (ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರ)ಗಳನ್ನು ಸೆಪ್ಟಂಬರ್ ಮೊದಲ ವಾರದಿಂದಲೇ ಆರಂಭಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಏನಿದು ನಮ್ಮ ಕ್ಲಿನಿಕ್ ? : ನಗರದಲ್ಲಿ ಪ್ರತಿ 50,000 ಜನಸಂಖ್ಯೆಗೆ ಒಂದರಂತೆ 21 ಪಿಎಚ್ಸಿ ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಅತೀ ಹೆಚ್ಚು ಒತ್ತಡವಿರುವ ಪಿಎಚ್ಸಿಗೆ ಸಮೀಪದಲ್ಲಿ ಉಪ ಕೇಂದ್ರಗಳಾಗಿ ಈ ಕ್ಲಿನಿಕ್ ಆರಂಭಿಸಲಾಗುತ್ತದೆ. ಪಿಎಚ್ಸಿ ಮಾದರಿಯಲ್ಲಿಯೇ ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಈ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ವೈದ್ಯರು, ಸ್ಟಾಫ್ ನರ್ಸ್, ಗ್ರೂಪ್ ಡಿ, ಡಾಟಾ ಎಂಟ್ರಿ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ಪ್ರಕಟಣೆ ಹೊರಡಿಸಲಾಗಿದೆ. ಈ ಕ್ಲಿನಿಕ್ ಸಮೀಪದಲ್ಲಿರುವ ಪಿಎಚ್ಸಿಯ ಎಎನ್ಎಂ (ಕಿರಿಯ ಆರೋಗ್ಯ ಸಹಾಯಕಿಯರು) ಸೇರಿದಂತೆ ಇನ್ನಿತರ ಕ್ಷೇತ್ರದ ಕಾರ್ಯ ಸಿಬ್ಬಂದಿ, ಲಸಿಕಾ ಸಿಬ್ಬಂದಿಗಳೇ ಇಲ್ಲಿಯೂ ಅದೇ ಕೆಲಸ ಮುಂದುವರಿಸುತ್ತಾರೆ.

ಸೇವೆ ಬಲವರ್ಧನೆಗೆ ಸಹಕಾರಿ :ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ಸ್ವಂತ ಹಣ ಖರ್ಚು ಮಾಡುವುದನ್ನು ಕಡಿಮೆ ಮಾಡುವುದು ಹಾಗೂ ದ್ವಿತೀಯ, ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ, ಪ್ರಾಥಮಿಕ ಆರೋಗ್ಯ ಸೇವೆ ವಿಕೇಂದ್ರಿಕರಣ, ಸಾಂಕ್ರಾಮಿಕ ಕಾಯಿಲೆಗಳ ಕಣ್ಗಾವಲು ವ್ಯವಸ್ಥೆ ಬಲಪಡಿಸುವ ಮೂಲಕ ರೋಗಗಳು ಉಲ್ಬಣವಾಗಿ ದೊಡ್ಡ ಪ್ರಮಾಣದ ಗಂಡಾಂತರಕಾರಿ ಪರಿಸ್ಥಿತಿ ಎದುರಾಗುವುದನ್ನು ನಿಯಂತ್ರಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಎಲ್ಲೆಲ್ಲಿ ಸೇವೆ ಆರಂಭ :ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಇತರ ಸದಸ್ಯರನ್ನು ಒಳಗೊಂಡ ಜಿಲ್ಲಾಸಮಿತಿಯಲ್ಲಿ ನಗರ ವ್ಯಾಪ್ತಿಯಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿಯೂ ಒಂದೊಂದು ಕ್ಲಿನಿಕ್ ಆರಂಭಿಸಲು ಚರ್ಚಿಸಲಾಗುವುದು. ಕೃಷ್ಣರಾಜ ಕ್ಷೇತ್ರದ ಶ್ರೀರಾಂಪುರ, ವಿವೇಕಾನಂದ ನಗರ ಭಾಗ, ಚಾಮರಾಜ ಕ್ಷೇತ್ರದಲ್ಲಿ ವಿಜಯನಗರ 2, 3, 4 ನೇ ಹಂತಕ್ಕೆ ಅನುಕೂಲವಾಗುವಂತೆ, ನರಸಿಂಹರಾಜ ಕ್ಷೇತ್ರದ ಭರತ್ ನಗರ, ಸಾತಗಳ್ಳಿ ಭಾಗದಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲು ಜಾಗ ಗುರುತಿಸಲಾಗುತ್ತಿದೆ. ಇದಲ್ಲದೇ ತಿ.ನರಸೀಪುರ, ಕೆ.ಆರ್.ನಗರ, ಎಚ್.ಡಿ.ಕೋಟೆ ಪಟ್ಟಣ ಪಂಚಾಯಿತಿಯಲ್ಲಿ ಈಗಾಗಲೇ ಕಟ್ಟಡಗಳನ್ನು ಬಾಡಿಗೆ ಆಧಾರದಲ್ಲಿಆಯ್ಕೆ ಮಾಡಿಕೊಳ್ಳುತ್ತೇವೆ.

 

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

23 mins ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

29 mins ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

40 mins ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

10 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

12 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago