ಮೈಸೂರು

ಆರೋಗ್ಯ ಸೇವೆಗೆ ‘ನಮ್ಮ ಕ್ಲಿನಿಕ್’ : ಡಾ ಸುಧಾಕರ್

ಮೈಸೂರು  : ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ಸ್ವಂತ ಹಣ ಖರ್ಚು ಮಾಡುವುದನ್ನು ಕಡಿಮೆ ಮಾಡುವುದು ಹಾಗೂ ದ್ವಿತೀಯ, ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ, ಪ್ರಾಥಮಿಕ ಆರೋಗ್ಯ ಸೇವೆ ವಿಕೇಂದ್ರಿಕರಣ, ಸಾಂಕ್ರಾಮಿಕ ಕಾಯಿಲೆಗಳ ಕಣ್ಗಾವಲು ವ್ಯವಸ್ಥೆ ಬಲಪಡಿಸುವ ಮೂಲಕ ರೋಗಗಳು ಉಲ್ಬಣವಾಗಿ ದೊಡ್ಡ ಪ್ರಮಾಣದ ಗಂಡಾಂತರಕಾರಿ ಪರಿಸ್ಥಿತಿ ಎದುರಾಗುವುದನ್ನು ನಿಯಂತ್ರಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಜನರಿಗೆ ಅಗತ್ಯ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹೊಸದಾಗಿ ಆರು ‘ನಮ್ಮ ಕ್ಲಿನಿಕ್’ ಕಾರ್ಯಾರಂಭಿಸಲಿವೆ. ಆರೋಗ್ಯ ಸೇವೆಯಿಂದ ವಂಚಿತವಾಗಿರುವ ಕೊಳಗೇರಿ, ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ದುರ್ಬಲ ವರ್ಗದವರು ವಾಸಿಸುವ ಪ್ರದೇಶಗಳಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ ಮೂರು, ತಿ.ನರಸೀಪುರ, ಕೆ.ಆರ್.ನಗರ, ಎಚ್.ಡಿ. ಕೋಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಆರು ನಮ್ಮ ಕ್ಲಿನಿಕ್ (ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರ)ಗಳನ್ನು ಸೆಪ್ಟಂಬರ್ ಮೊದಲ ವಾರದಿಂದಲೇ ಆರಂಭಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಏನಿದು ನಮ್ಮ ಕ್ಲಿನಿಕ್ ? : ನಗರದಲ್ಲಿ ಪ್ರತಿ 50,000 ಜನಸಂಖ್ಯೆಗೆ ಒಂದರಂತೆ 21 ಪಿಎಚ್ಸಿ ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಅತೀ ಹೆಚ್ಚು ಒತ್ತಡವಿರುವ ಪಿಎಚ್ಸಿಗೆ ಸಮೀಪದಲ್ಲಿ ಉಪ ಕೇಂದ್ರಗಳಾಗಿ ಈ ಕ್ಲಿನಿಕ್ ಆರಂಭಿಸಲಾಗುತ್ತದೆ. ಪಿಎಚ್ಸಿ ಮಾದರಿಯಲ್ಲಿಯೇ ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಈ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ವೈದ್ಯರು, ಸ್ಟಾಫ್ ನರ್ಸ್, ಗ್ರೂಪ್ ಡಿ, ಡಾಟಾ ಎಂಟ್ರಿ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ಪ್ರಕಟಣೆ ಹೊರಡಿಸಲಾಗಿದೆ. ಈ ಕ್ಲಿನಿಕ್ ಸಮೀಪದಲ್ಲಿರುವ ಪಿಎಚ್ಸಿಯ ಎಎನ್ಎಂ (ಕಿರಿಯ ಆರೋಗ್ಯ ಸಹಾಯಕಿಯರು) ಸೇರಿದಂತೆ ಇನ್ನಿತರ ಕ್ಷೇತ್ರದ ಕಾರ್ಯ ಸಿಬ್ಬಂದಿ, ಲಸಿಕಾ ಸಿಬ್ಬಂದಿಗಳೇ ಇಲ್ಲಿಯೂ ಅದೇ ಕೆಲಸ ಮುಂದುವರಿಸುತ್ತಾರೆ.

ಸೇವೆ ಬಲವರ್ಧನೆಗೆ ಸಹಕಾರಿ :ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ಸ್ವಂತ ಹಣ ಖರ್ಚು ಮಾಡುವುದನ್ನು ಕಡಿಮೆ ಮಾಡುವುದು ಹಾಗೂ ದ್ವಿತೀಯ, ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ, ಪ್ರಾಥಮಿಕ ಆರೋಗ್ಯ ಸೇವೆ ವಿಕೇಂದ್ರಿಕರಣ, ಸಾಂಕ್ರಾಮಿಕ ಕಾಯಿಲೆಗಳ ಕಣ್ಗಾವಲು ವ್ಯವಸ್ಥೆ ಬಲಪಡಿಸುವ ಮೂಲಕ ರೋಗಗಳು ಉಲ್ಬಣವಾಗಿ ದೊಡ್ಡ ಪ್ರಮಾಣದ ಗಂಡಾಂತರಕಾರಿ ಪರಿಸ್ಥಿತಿ ಎದುರಾಗುವುದನ್ನು ನಿಯಂತ್ರಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಎಲ್ಲೆಲ್ಲಿ ಸೇವೆ ಆರಂಭ :ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಇತರ ಸದಸ್ಯರನ್ನು ಒಳಗೊಂಡ ಜಿಲ್ಲಾಸಮಿತಿಯಲ್ಲಿ ನಗರ ವ್ಯಾಪ್ತಿಯಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿಯೂ ಒಂದೊಂದು ಕ್ಲಿನಿಕ್ ಆರಂಭಿಸಲು ಚರ್ಚಿಸಲಾಗುವುದು. ಕೃಷ್ಣರಾಜ ಕ್ಷೇತ್ರದ ಶ್ರೀರಾಂಪುರ, ವಿವೇಕಾನಂದ ನಗರ ಭಾಗ, ಚಾಮರಾಜ ಕ್ಷೇತ್ರದಲ್ಲಿ ವಿಜಯನಗರ 2, 3, 4 ನೇ ಹಂತಕ್ಕೆ ಅನುಕೂಲವಾಗುವಂತೆ, ನರಸಿಂಹರಾಜ ಕ್ಷೇತ್ರದ ಭರತ್ ನಗರ, ಸಾತಗಳ್ಳಿ ಭಾಗದಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲು ಜಾಗ ಗುರುತಿಸಲಾಗುತ್ತಿದೆ. ಇದಲ್ಲದೇ ತಿ.ನರಸೀಪುರ, ಕೆ.ಆರ್.ನಗರ, ಎಚ್.ಡಿ.ಕೋಟೆ ಪಟ್ಟಣ ಪಂಚಾಯಿತಿಯಲ್ಲಿ ಈಗಾಗಲೇ ಕಟ್ಟಡಗಳನ್ನು ಬಾಡಿಗೆ ಆಧಾರದಲ್ಲಿಆಯ್ಕೆ ಮಾಡಿಕೊಳ್ಳುತ್ತೇವೆ.

 

andolana

Recent Posts

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

22 mins ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

6 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

6 hours ago