ಮೈಸೂರು

ಎಲ್ಲರ ಅಭಿವೃದ್ಧಿಯಷ್ಟೆ ನಮ್ಮ ಗುರಿ : ಸಿ.ಎಂ. ಸಿದ್ದರಾಮಯ್ಯ

ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದರು.

ಚಾತುವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ “ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ನಾವು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕ ಸಬಲರಾಗಬೇಕು. ಈ ಉದ್ದೇಶದಿಂದಲೇ ನಾನು ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆವು ಎಂದು ವಿವರಿಸಿದರು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ ಎಂದರು.

ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿರುವುದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕ ಚಟುವಟಿಕೆಗೆ ವೇಗ ಒದಗಿ ಬಂದಿದೆ ಎಂದರು.

ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ ಎಂದರು.

ರಾಜ್ಯದಲ್ಲಿ ದಲಿತ ಹೋರಾಟ ಜೋರಾಗಿದ್ದ ಸಂದರ್ಭದಲ್ಲಿ, ” ಹೆಂಡ ಬೇಡ-ಶಾಲೆ ಬೇಕು” ಎನ್ನುವ ಘೋಷಣೆ ಕೂಗಿದ್ದರು. ಈ ಘೋಷಣೆಯ ಪ್ರೇರಣೆಯಿಂದ ನಾನು ಮೊರಾರ್ಜಿ ವಸತಿ ಶಾಲೆಗಳನ್ನು ಆರಂಭಿಸಿದೆ. ಈಗ ಹೋಬಳಿಗೊಂದು ವಸತಿ ಶಾಲೆಗಳಿವೆ ಎಂದರು.

ನಾನು ಓದುವಾಗ ಹೋಟೆಲಿಂದ ಸಾಂಬಾರು ತಂದು, ರೂಮಲ್ಲಿ ಅನ್ನ ಮಾಡಿಕೊಂಡು ತಿನ್ನುತ್ತಿದ್ದೆವು. ಈ ಕಷ್ಟ ನನಗೆ ಗೊತ್ತಿದೆ.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಶಪಥ ಮಾಡಬೇಕು. ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು ಎಂದು ಒತ್ತಾಯಿಸಿದರು.

ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ-ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ ಎಂದು ಕರೆ ನೀಡಿದರು.

ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಯತೀಂದ್ರ ಸಿದ್ದರಾಮಯ್ಯ, ದರ್ಶನ್ ದೃವನಾರಾಯಣ್, ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು ಸೇರಿ ಉಪ್ಪಾರ ಸಮುದಾಯದ ಮುಖಂಡರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago