ಮೈಸೂರು

ಶೋಷಿತ ಸಮುದಾಯಗಳ ಪರ ನಮ್ಮ ಸರ್ಕಾರ ಇರಲಿದೆ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಎಂದು ಭರವಸೆ ನೀಡಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಕಲಾಮಂದಿರಲ್ಲಿ ಆಯೋಜಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ನುಲಿಯ ಚಂದಯ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಚಿವರು ಮಾತನಾಡಿದರು.

ಸಮಾನತೆ ಹಾಗೂ ಸಮಾನ ಅವಕಾಶಗಳು ಸಂವಿಧಾನದ ಆಶಯವಾಗಿದೆ. ಅದನ್ನು ಸಾಕಾರಗೊಳಿಸುವುದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಿ, ತುಳಿತಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತುವುದೇ ನಮ್ಮ ಸರ್ಕಾರದ ಪ್ರಮುಖ ಆಶಯವಾಗಿದೆ ಎಂದು ಹೇಳಿದರು.

ಹನ್ನೆರಡೇ ಶತಮಾನದ ಶರಣ ಚಳುವಳಿಯನ್ನ ನೆನಪಿಸಿಕೊಳ್ಳುವ ಕಾರ್ಯಕ್ರಮ ಇದಾಗಿದೆ. ಸಾಮಾಜಿಕ ಪಿಡುಗು ಮತ್ತು ಮೌಢ್ಯಗಳನ್ನು ಪ್ರತಿಪಾದನೆ ಮಾಡುತ್ತ ವೈದಿಕಶಾಹಿಗಳು ಶ್ರಮಜೀವನಕ್ಕೆ ಒಗ್ಗದೆ ಕಾಯಕ ಸಮುದಾಯಗಳಲ್ಲಿ ಮೂಢನಂಬಿಕೆ ಬಿತ್ತು, ಅನೇಕ ಸಂಪ್ರದಾಯಗಳನ್ನು ಹೇರಿದರು. ಇದರ ವಿರುದ್ಧ ಬಸವಣ್ಣನವರು ಹೋರಾಟ ನಡೆಸಿದರು ಎಂದರು.

ಮೂಲಭೂತವಾದ ಮತ್ತು ಮೂಢನಂಬಿಕೆ ವಿರುದ್ಧ ಚಳುವಳಿಯನ್ನು ಹುಟ್ಟುಹಾಕಿದ ಬಸವಣ್ಣನ ಸಮಕಾಲಿನವರಾದ ನುಲಿಯ ಚಂದಯ್ಯ ಅವರು ಶ್ರಮ ಹಾಗೂ ಕಾಯಕ ಸಂಸ್ಕೃತಿಯನ್ನು ನಂಬಿದವರು. ಸದಾ ಕಾಯಕ ಮತ್ತು ದಾಸೋಹ ಪರಿಕಲ್ಪನೆಯಲ್ಲಿ ತನ್ಮಯರಾಗಿದ್ದರು. ಸಮಸಮಾಜದ ನಿರ್ಮಾಣ ಮಾಡಲು ಸಾಮಾಜಿಕ ಪಿಡುಗು ಹಾಗೂ ಮೂಢನಂಬಿಕೆ ವಿರುದ್ಧ ಜನರಿಗೆ ಅರಿವು ಮೂಡಿಸಿದರು ಎಂದು ಹೇಳಿದರು.

ಭಾರತವು ಅನೇಕ ಧರ್ಮ, ಭಾಷೆ, ವೈವಿಧ್ಯವಾದ ಆಚಾರದ ವಿಚಾರದ ನಡುವೆ ಏಕತೆಯನ್ನು ಕಾಣುತ್ತ ಬಂದಿದೆ. ಈ ದೇಶದ ಮೂಲನಿವಾಸಿಗಳು ದಲಿತರು‌. ಈ ಸಮುದಾಯದ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಗೆ ಸಂವಿಧಾನವಿದೆ. ಇದರೊಂದಿಗೆ ಅನುಭವ ಮಂಟಪದ ವಿಚಾರದ ಅಡಿಯಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾನಿರುವುದು ನಿಮಗಾಗಿ, ನೀವಿರುವುದು ನಮಗಾಗಿ, ನಾಡಿರುವುದು ನಮಗಾಗಿ ಎಂಬ ಸಂದೇಶದಂತೆ ಯುವಕರು ಶರಣರ ಸಾಹಿತ್ಯಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದರು.

ಶ್ರೀ ಕುಂದೂರು ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶರತ್ ಚಂದ್ರಸ್ವಾಮಿಗಳು ಮಾತನಾಡಿ, ಸುಮಾರು 70 ವರ್ಷ ನುಲಿಯ ಚಂದಯ್ಯ ನವರು ಬದುಕಿದ್ದರೂ ಅವರ ಇಡೀ ಜೀವನ ಕಾಯಕದಲ್ಲೇ ಮುಳುಗಿತ್ತು. ಲಿಂಗವು ಮುಖ್ಯವಲ್ಲ ಕಾಯಕದ ಮುಂದೆ ಅಂತಹ ಕಾಯಕಕ್ಕೆ ಹೆಚ್ಚು ಮಹತ್ವವನ್ನು ಕೊಟ್ಟ ಮಹಾನ್ ನಾಯಕನ ಸಮಾಜಕ್ಕೆ ನಾವು ನೀವೆಲ್ಲರೂ ಸೇರಿದ್ದೇವೆ ಎಂದು ಹೇಳಿದರು.

ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬ್ರಹ್ಮ ಮಠದ ಪೀಠಾಧಿಪತಿಗಳಾದ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನ ಮಾಡಿದರು.

ಕಾರ್ಯಕ್ರಮದಲ್ಲಿ ಸಾಲೂರು ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಸಾನಿಧ್ಯವಹಿಸಿದ್ದರು ಮಾಜಿ ಶಾಸಕ ಜಿ.ಚಂದ್ರಣ್ಣ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಎಕೆಎಂಎಸ್ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ರಾಜ್ಯ ಉಪಾಧ್ಯಕ್ಷೆ ಭೀಮಪುತ್ರಿ ನಾಗಮ್ಮ, ಕೃಷ್ಣದೇವರಾಯ ವಿ.ವಿ. ಕುಲಪತಿ ಎನ್.ಮುನಿರಾಜು, ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ.ಅಂಜನ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

1 hour ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

1 hour ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

2 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

2 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

2 hours ago