ಮೈಸೂರು

ಶೋಷಿತ ಸಮುದಾಯಗಳ ಪರ ನಮ್ಮ ಸರ್ಕಾರ ಇರಲಿದೆ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಎಂದು ಭರವಸೆ ನೀಡಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಕಲಾಮಂದಿರಲ್ಲಿ ಆಯೋಜಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ನುಲಿಯ ಚಂದಯ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಚಿವರು ಮಾತನಾಡಿದರು.

ಸಮಾನತೆ ಹಾಗೂ ಸಮಾನ ಅವಕಾಶಗಳು ಸಂವಿಧಾನದ ಆಶಯವಾಗಿದೆ. ಅದನ್ನು ಸಾಕಾರಗೊಳಿಸುವುದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಿ, ತುಳಿತಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತುವುದೇ ನಮ್ಮ ಸರ್ಕಾರದ ಪ್ರಮುಖ ಆಶಯವಾಗಿದೆ ಎಂದು ಹೇಳಿದರು.

ಹನ್ನೆರಡೇ ಶತಮಾನದ ಶರಣ ಚಳುವಳಿಯನ್ನ ನೆನಪಿಸಿಕೊಳ್ಳುವ ಕಾರ್ಯಕ್ರಮ ಇದಾಗಿದೆ. ಸಾಮಾಜಿಕ ಪಿಡುಗು ಮತ್ತು ಮೌಢ್ಯಗಳನ್ನು ಪ್ರತಿಪಾದನೆ ಮಾಡುತ್ತ ವೈದಿಕಶಾಹಿಗಳು ಶ್ರಮಜೀವನಕ್ಕೆ ಒಗ್ಗದೆ ಕಾಯಕ ಸಮುದಾಯಗಳಲ್ಲಿ ಮೂಢನಂಬಿಕೆ ಬಿತ್ತು, ಅನೇಕ ಸಂಪ್ರದಾಯಗಳನ್ನು ಹೇರಿದರು. ಇದರ ವಿರುದ್ಧ ಬಸವಣ್ಣನವರು ಹೋರಾಟ ನಡೆಸಿದರು ಎಂದರು.

ಮೂಲಭೂತವಾದ ಮತ್ತು ಮೂಢನಂಬಿಕೆ ವಿರುದ್ಧ ಚಳುವಳಿಯನ್ನು ಹುಟ್ಟುಹಾಕಿದ ಬಸವಣ್ಣನ ಸಮಕಾಲಿನವರಾದ ನುಲಿಯ ಚಂದಯ್ಯ ಅವರು ಶ್ರಮ ಹಾಗೂ ಕಾಯಕ ಸಂಸ್ಕೃತಿಯನ್ನು ನಂಬಿದವರು. ಸದಾ ಕಾಯಕ ಮತ್ತು ದಾಸೋಹ ಪರಿಕಲ್ಪನೆಯಲ್ಲಿ ತನ್ಮಯರಾಗಿದ್ದರು. ಸಮಸಮಾಜದ ನಿರ್ಮಾಣ ಮಾಡಲು ಸಾಮಾಜಿಕ ಪಿಡುಗು ಹಾಗೂ ಮೂಢನಂಬಿಕೆ ವಿರುದ್ಧ ಜನರಿಗೆ ಅರಿವು ಮೂಡಿಸಿದರು ಎಂದು ಹೇಳಿದರು.

ಭಾರತವು ಅನೇಕ ಧರ್ಮ, ಭಾಷೆ, ವೈವಿಧ್ಯವಾದ ಆಚಾರದ ವಿಚಾರದ ನಡುವೆ ಏಕತೆಯನ್ನು ಕಾಣುತ್ತ ಬಂದಿದೆ. ಈ ದೇಶದ ಮೂಲನಿವಾಸಿಗಳು ದಲಿತರು‌. ಈ ಸಮುದಾಯದ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಗೆ ಸಂವಿಧಾನವಿದೆ. ಇದರೊಂದಿಗೆ ಅನುಭವ ಮಂಟಪದ ವಿಚಾರದ ಅಡಿಯಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾನಿರುವುದು ನಿಮಗಾಗಿ, ನೀವಿರುವುದು ನಮಗಾಗಿ, ನಾಡಿರುವುದು ನಮಗಾಗಿ ಎಂಬ ಸಂದೇಶದಂತೆ ಯುವಕರು ಶರಣರ ಸಾಹಿತ್ಯಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದರು.

ಶ್ರೀ ಕುಂದೂರು ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶರತ್ ಚಂದ್ರಸ್ವಾಮಿಗಳು ಮಾತನಾಡಿ, ಸುಮಾರು 70 ವರ್ಷ ನುಲಿಯ ಚಂದಯ್ಯ ನವರು ಬದುಕಿದ್ದರೂ ಅವರ ಇಡೀ ಜೀವನ ಕಾಯಕದಲ್ಲೇ ಮುಳುಗಿತ್ತು. ಲಿಂಗವು ಮುಖ್ಯವಲ್ಲ ಕಾಯಕದ ಮುಂದೆ ಅಂತಹ ಕಾಯಕಕ್ಕೆ ಹೆಚ್ಚು ಮಹತ್ವವನ್ನು ಕೊಟ್ಟ ಮಹಾನ್ ನಾಯಕನ ಸಮಾಜಕ್ಕೆ ನಾವು ನೀವೆಲ್ಲರೂ ಸೇರಿದ್ದೇವೆ ಎಂದು ಹೇಳಿದರು.

ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬ್ರಹ್ಮ ಮಠದ ಪೀಠಾಧಿಪತಿಗಳಾದ ವಿದ್ವಾನ್ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನ ಮಾಡಿದರು.

ಕಾರ್ಯಕ್ರಮದಲ್ಲಿ ಸಾಲೂರು ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಸಾನಿಧ್ಯವಹಿಸಿದ್ದರು ಮಾಜಿ ಶಾಸಕ ಜಿ.ಚಂದ್ರಣ್ಣ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಎಕೆಎಂಎಸ್ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ರಾಜ್ಯ ಉಪಾಧ್ಯಕ್ಷೆ ಭೀಮಪುತ್ರಿ ನಾಗಮ್ಮ, ಕೃಷ್ಣದೇವರಾಯ ವಿ.ವಿ. ಕುಲಪತಿ ಎನ್.ಮುನಿರಾಜು, ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ.ಅಂಜನ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago