ಮೈಸೂರು

ಮೈಸೂರು: ರಾತ್ರೋ ರಾತ್ರಿ ಸಾಲು ಸಾಲು ಮರಗಳ ಹನನ: ಪರಿಸರ ಪ್ರೇಮಿಗಳ ಆಕ್ರೋಶ

ಮೈಸೂರು: ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಲು ಸಾಲು ಮರಗಳಿಗೆ ಕೊಡಲಿ ಬಿದ್ದಿದೆ.

ನಗರದ ಎಸ್ಪಿ ಕಚೇರಿ ಪಕ್ಕದ ರಸ್ತೆಯ ಉದ್ದಕ್ಕೂ ಇದ್ದ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದೆ. ಸಾರ್ವಜನಿಕರ ಕಣ್ಣು ತಪ್ಪಿಸಿ ಅರಣ್ಯ ಇಲಾಖೆ ಮರಗಳನ್ನು ಕಡಿದು ಹಾಕಿರುವ ಆರೋಪ ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಯಾರು ಇಲ್ಲದ ವೇಳೆ ರಾತ್ರೋರಾತ್ರಿ ಮರಗಳನ್ನು ಕಡಿದು ಹಾಕಲಾಗಿದ್ದು, ಆ ರಸ್ತೆ ಸಂಪೂರ್ಣ ಬಂದ್ ಆಗಿದೆ. ನೆಲಕ್ಕುರುಳಿದ ಬೃಹತ್ ಮರಗಳನ್ನು ನೋಡಿ ಜನರು ಬೇಸರ ವ್ಯಕ್ತಪಡಿಸುತ್ತಿದ್ದು, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಾರ್ವಜನಿಕರು ಒಣಗಿರುವ ಮರಗಳನ್ನ ಕಟಾವು ಮಾಡದೇ ಚೆನ್ನಾಗಿರುವ ಮರಗಳನ್ನೇಕೆ ನಾಶ ಮಾಡುತ್ತೀರಿ. 40ಕ್ಕೂ ಹೆಚ್ಚು ಮರಗಳಲ್ಲಿ ವಾಸವಿದ್ದ ಪಕ್ಷಿಗಳ ಗತಿಯೇನು ಎಂದು ಪ್ರಶ್ನಿಸಿ, ಮೈಸೂರಿಗೆ ರಸ್ತೆ ಅಗಲೀಕರಣ ಮಾಡುವ ಅವಶ್ಯಕತೆ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

18 mins ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

2 hours ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

3 hours ago