ಮೈಸೂರು

ಮೈಸೂರು: ರಾತ್ರೋ ರಾತ್ರಿ ಸಾಲು ಸಾಲು ಮರಗಳ ಹನನ: ಪರಿಸರ ಪ್ರೇಮಿಗಳ ಆಕ್ರೋಶ

ಮೈಸೂರು: ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಲು ಸಾಲು ಮರಗಳಿಗೆ ಕೊಡಲಿ ಬಿದ್ದಿದೆ.

ನಗರದ ಎಸ್ಪಿ ಕಚೇರಿ ಪಕ್ಕದ ರಸ್ತೆಯ ಉದ್ದಕ್ಕೂ ಇದ್ದ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದೆ. ಸಾರ್ವಜನಿಕರ ಕಣ್ಣು ತಪ್ಪಿಸಿ ಅರಣ್ಯ ಇಲಾಖೆ ಮರಗಳನ್ನು ಕಡಿದು ಹಾಕಿರುವ ಆರೋಪ ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಯಾರು ಇಲ್ಲದ ವೇಳೆ ರಾತ್ರೋರಾತ್ರಿ ಮರಗಳನ್ನು ಕಡಿದು ಹಾಕಲಾಗಿದ್ದು, ಆ ರಸ್ತೆ ಸಂಪೂರ್ಣ ಬಂದ್ ಆಗಿದೆ. ನೆಲಕ್ಕುರುಳಿದ ಬೃಹತ್ ಮರಗಳನ್ನು ನೋಡಿ ಜನರು ಬೇಸರ ವ್ಯಕ್ತಪಡಿಸುತ್ತಿದ್ದು, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಾರ್ವಜನಿಕರು ಒಣಗಿರುವ ಮರಗಳನ್ನ ಕಟಾವು ಮಾಡದೇ ಚೆನ್ನಾಗಿರುವ ಮರಗಳನ್ನೇಕೆ ನಾಶ ಮಾಡುತ್ತೀರಿ. 40ಕ್ಕೂ ಹೆಚ್ಚು ಮರಗಳಲ್ಲಿ ವಾಸವಿದ್ದ ಪಕ್ಷಿಗಳ ಗತಿಯೇನು ಎಂದು ಪ್ರಶ್ನಿಸಿ, ಮೈಸೂರಿಗೆ ರಸ್ತೆ ಅಗಲೀಕರಣ ಮಾಡುವ ಅವಶ್ಯಕತೆ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

ಸ್ವಚ್ಛ ನಗರಿ ಮೈಸೂರಿನಲ್ಲಿ ಅಶುಚಿತ್ವ ತಾಂಡವ: ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟಸ್ವಚ್ಛ ನಗರಿ ಮೈಸೂರಿನಲ್ಲಿ ಅಶುಚಿತ್ವ ತಾಂಡವ: ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ

ಸ್ವಚ್ಛ ನಗರಿ ಮೈಸೂರಿನಲ್ಲಿ ಅಶುಚಿತ್ವ ತಾಂಡವ: ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ

ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಹಾಗೂ ಮಲ್ಲಿಗೆ ನಗರಿ ಎಂದೆಲ್ಲಾ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ಒಂದೆಡೆ ಸ್ವಚ್ಛತಾ ಸರ್ವೇಕ್ಷಣಾ ಅಭಿಯಾನ…

23 mins ago
ಮೈಸೂರಿನಲ್ಲಿ ಮರಗಳ ಹನನ ಪ್ರಕರಣ: ಮುಡಾ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಮೈಸೂರಿನಲ್ಲಿ ಮರಗಳ ಹನನ ಪ್ರಕರಣ: ಮುಡಾ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಮೈಸೂರಿನಲ್ಲಿ ಮರಗಳ ಹನನ ಪ್ರಕರಣ: ಮುಡಾ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಮೈಸೂರು: ರಸ್ತೆ ಅಗಲೀಕರಣದ ಹೆಸರೇಳಿ ಹೈದರ್‌ ಅಲಿ ರಸ್ತೆಯಲ್ಲಿ 40 ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ…

51 mins ago
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂನಲ್ಲಿ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂನಲ್ಲಿ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂನಲ್ಲಿ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಚತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮೇ.14ಕ್ಕೆ ಮುಂದೂಡಿಕೆ…

54 mins ago

UPSC ಫಲಿತಾಂಶ ಪ್ರಕಟ: ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ದೇಶಕ್ಕೆ ನಂ.1

ನವದೆಹಲಿ: ಕೇಂದ್ರ ಲೋಕಸಭಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ಎಂಬುವವರು…

1 hour ago

ಸಾರ್ವಕಾಲಿಕ ದಾಖಲೆ ಕಂಡ ಚಿನ್ನದ ಬೆಲೆ: 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂ

ನವದೆಹಲಿ: ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದ್ದು, 10 ಗ್ರಾಂಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಾಟಿದೆ. ಜಾಗತಿಕ ಮಾರುಕಟ್ಟೆಯಲ್ಲಿನ…

1 hour ago

ಧಾರ್ಮಿಕ ಪದ್ಧತಿ ದೇಶದ ಪರಂಪರೆ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು…

1 hour ago