ಮೈಸೂರು: ಜಿಲ್ಲೆಯಲ್ಲಿ ಮಾರ್ಚ್.1ರಿಂದ 10ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯುವ ವೇಳೆ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು(ಫೆಬ್ರವರಿ.21) ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ 50 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ವಾರ್ಷಿಕ ಪರೀಕ್ಷೆಗಳು ನಡೆಯುತ್ತವೆ. ಅವುಗಳಲ್ಲಿ ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂದು ಮಾಹಿತಿ ನೀಡಿದ್ದಾರೆ.
ಈ ಎಲ್ಲಾ ಪರೀಕ್ಷೆ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಮಾರ್ಗಾಧಿಕಾರಿಗಳು ನೇಮಕ ಮಾಡಲಾಗಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಚೆಸ್ಕಾಂ ಅವರಿಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
ಇನ್ನೂ ಮೈಸೂರಿನಲ್ಲಿ 27 ಪರೀಕ್ಷಾ ಕೇಂದ್ರಗಳು, ನಂಜನಗೂಡಿನಲ್ಲಿ 5, ಹುಣಸೂರಿನಲ್ಲಿ 4, ಟಿ.ನರಸೀಪುರದಲ್ಲಿ 4, ಪಿರಿಯಾಪಟ್ಟಣದಲ್ಲಿ 4 ಹಾಗೂ ಎಚ್.ಡಿ.ಕೋಟೆಯಲ್ಲಿ 2 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಿದರು.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…