ಮೈಸೂರು

ನಾಟ್ಯ ನಿಲ್ಲಿಸಿದ ಶಾಂತಲೆ

ಮೈಸೂರು: ಕನ್ನಡ ಚಿತ್ರಗಳನ್ನೇ ಪ್ರದರ್ಶಿಸುವ ಮೂಲಕ ಮನರಂಜನಾ ಕ್ಷೇತ್ರದಲ್ಲಿ ನಾಡಿನ ಸಂಸ್ಕೃತಿ ಹಾಗೂ ಭಾಷೆಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಸಾಂಸ್ಕೃತಿಕ ನಗರಿ ಮೈಸೂರಿನ ಹಳೆಯ ಚಿತ್ರಮಂದಿರಗಳಲ್ಲಿ ಒಂದಾದ ಶಾಂತಲಾ ಇನ್ನು ಚಿತ್ರರಸಿಕರ ಪಾಲಿಗೆ ನೆನಪಾಗಷ್ಟೇ ಉಳಿಯಲಿದೆ.

ಹೌದು, ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಶಾಂತಲಾ ಚಿತ್ರಮಂದಿರ ಕಳೆದ ಸುಮಾರು 46 ವರ್ಷಗಳಿಂದ ಕನ್ನಡ ಸಿನಿಮಾಗಳನ್ನೇ ಪ್ರದರ್ಶಿಸುತ್ತಾ, ಎಲ್ಲರಿಗೂ ಮನರಂಜನೆ ನೀಡುತ್ತಾ ಬಂದಿತ್ತು. ಆದರೆ ಕಳೆದ ನಾಲ್ಕು ವರ್ಷಗಳ ಹಿಂದೆಯೇ ಅದರ ಕೊನೆಯ ಆಟ ಮುಗಿದಿತ್ತು.

ಕೊರೊನಾ ವೈರಸ್‌ ಹಾವಳಿ ಶುರುವಾಗಿದ್ದ ವೇಳೆಯೇ ಚಿತ್ರಪ್ರದರ್ಶನ ನಿಲ್ಲಿಸಿದ್ದ ಶಾಂತಲಾದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆಯೇ ಪ್ರದರ್ಶನಗಳು ಕಾಣಲೇ ಇಲ್ಲ. ಅದು ಶಾಶ್ವತವಾಗಿ ಮುಚ್ಚಿಹೋಗಿದೆ ಎಂಬ ಸಂಗತಿಯನ್ನು ತಿಳಿದು ಅನೇಕ ಚಿತ್ರರಸಿಕರು ಬೇಸರ ವ್ಯಕ್ತಪಡಿಸಿದ್ದರು.

ಬಂಗಾರದ ಪಂಜರ ಚಿತ್ರ ಪ್ರದರ್ಶನದ ಮೂಲಕ ಶಾಂತಲಾ ಚಿತ್ರಮಂದಿರ, ಸಿನಿಮಾಗಳನ್ನು ಪೇಕ್ಷಕರಿಗೆ ತಲುಪಿಸುವ ಕೊಂಡಿಯಾಗಿ ಕಾರ್ಯ ಆರಂಭಿಸಿತ್ತು. ರಮೇಶ್‌ ಅರವಿಂದ್‌ ಅಭಿನಯದ ಶಿವಾಜಿ ಸುರತ್ಕಲ್‌ ಇಲ್ಲಿ ಪ್ರದರ್ಶನಗೊಂಡ ಕೊನೆಯ ಸಿನಿಮಾವಾಗಿತ್ತು ಎಂದು ಹೇಳಲು ಇಂದಿಗೂ ನಮಗೆ ಭಾರೀ ಬೇಸರವಾಗುತ್ತಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆಯೇ ಚಿತ್ರಮಂದಿರ ಕ್ಲೋಸ್‌ ಆಗಿದ್ದು, ಶಾಂತಲಾ ಚಿತ್ರಮಂದಿರದ ಸಿಬ್ಬಂದಿಗೆ ಬೀಳ್ಕೊಡುಗೆ ಸಮಾರಂಭವನ್ನು ಸಹ ಏರ್ಪಡಿಸಲಾಗಿತ್ತು. ಇನ್ನು ಮುಂದೆ ಇಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಚಿತ್ರಮಂದಿರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಕಣ್ಣಾಲಿಗಳು ತುಂಬಿಬಂದವು.

ಚಿತ್ರಮಂದಿರ ಆರಂಭವಾದ ದಿನದಿಂದ ಕೊನೆಯವರೆಗೂ ಸಿನಿಮಾ ಪ್ರದರ್ಶನಕ್ಕೂ ಮುನ್ನ ನಮೋ ವೆಂಕಟೇಶ, ನಮೋ ತಿರುಮಲೇಶ ಹಾಡನ್ನು ಪ್ರಸಾರ ಮಾಡಲಾಗುತ್ತಿತ್ತು. ಕೊನೆಯ ದಿನ ಕೂಡ ಅಂತಿಮ ಸಲ ಈ ಹಾಡನ್ನು ಪ್ರಸಾರ ಮಾಡಲಾಗಿತ್ತು. ಈ ವೇಳೆ ಚಿತ್ರಮಂದಿರದ ಸಿಬ್ಬಂದಿಗಳು ಕಣ್ಣೀರು ಹಾಕಿದ್ದರು.

ಬಳಿಕ ಕೆಲವು ಚಿತ್ರಗಳ ದೃಶ್ಯಗಳನ್ನು ಕೂಡ ಕೊನೆಯ ಬಾರಿಗೆ ಎಲ್ಲರೂ ಜೊತೆಗೂಡಿ ವೀಕ್ಷಿಸಿದರು. ಬಳಿಕ ಚಿತ್ರಮಂದಿರದ ಮುಂಭಾಗದಲ್ಲಿ ಸಿಬ್ಬಂದಿ ಮತ್ತು ಪಾಲುದಾರರಾದ ಪದ್ಮನಾಭ ಪದಕಿ, ಮಧುಸೂದನ, ಅನಿಲ್‌, ಹನುಮಂತು, ಪ್ರಕಾಶ್‌, ವ್ಯವಸ್ಥಾಪಕ ದೇವರಾಜ್‌ ಮುಂತಾದವರು ಕೊನೆಯ ಫೋಟೋ ತೆಗೆಸಿಕೊಂಡಿದ್ದರು.

ಇಷ್ಟೆಲ್ಲಾ ಹೊಚ್ಚ ಹೊಸ ಸಿನಿಮಾಗಳನ್ನು ತೋರಿಸುವ ಮೂಲಕ ಸಿನಿ ರಸಿಕರಿಗೆ ಭಾರೀ ಮನರಂಜನೆ ನೀಡುತ್ತಿದ್ದ ಶಾಂತಲಾ ಚಿತ್ರಮಂದಿರವನ್ನು ಕಳೆದ ನಾಲ್ಕು ವರ್ಷಗಳ ಹಿಂದೆ ಮುಚ್ಚಲಾಗಿತ್ತು. ರಸ್ತೆಯಲ್ಲಿ ಹೋಗುತ್ತಿದ್ದ ಜನರು ಶಾಂತಲಾ ಚಿತ್ರಮಂದಿರವನ್ನು ನೋಡಿ ಖುಷಿಪಡುತ್ತಿದ್ದರು. ಆದರೆ ಈಗ ಅದನ್ನು ತೆರವು ಮಾಡಲಾಗಿದ್ದು, ಇಲ್ಲಿ ಮಲ್ಟಿಪ್ಲೆಕ್ಸ್‌ ಕಟ್ಟುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಒಟ್ಟಾರೆಯಾಗಿ ಸಿನಿ ರಸಿಕರಿಗೆ ಭಾರೀ ಮನರಂಜನೆ ನೀಡುತ್ತಿದ್ದ ಶಾಂತಲಾ ಚಿತ್ರಮಂದಿರವನ್ನು ಈಗ ತೆರವು ಮಾಡಲಾಗಿದ್ದು, ಚಿತ್ರ ರಸಿಕರಿಗೆ ಭಾರೀ ಬೇಸರ ತರಿಸಿದೆ. ಚಿತ್ರಮಂದಿರದ ತೆರವು ಬಳಿಕ ಆ ಸ್ಥಳದಲ್ಲಿ ಮಲ್ಟಿಪ್ಲೆಕ್ಸ್‌ ಕಟ್ಟಲಾಗುತ್ತದೆ. ಈ ಮೂಲಕ ಶಾಂತಲಾ ಚಿತ್ರಮಂದಿರ ಇತಿಹಾಸದ ಪುಟ ಸೇರಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

9 mins ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

14 mins ago

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…

36 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

1 hour ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

1 hour ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

2 hours ago