ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ (ಮಾರ್ಚ್ 22) ಅದ್ಧೂರಿಯಾಗಿ ಪಂಚ ಮಹಾರಥೋತ್ಸವ ನೆರವೇರಿತು. ಲಕ್ಷಾಂತರ ಮಂದಿ ಭಕ್ತರು ಬೇರೆ-ಬೇರೆ ಊರುಗಳಿಂದ ಆಗಮಿಸಿ ದೇವರ ದರ್ಶನಕ್ಕೆ ಪಾತ್ರರಾದರು.
ಇಂದು ಬೆಳಿಗ್ಗೆ 6:30 ರಿಂದ 6:50ರ ಒಳಗಿನಭ ಮೀನ ಲಗ್ನದಲ್ಲಿ ಈ ಬಾರಿಯ ಪಂಚಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಲಕ್ಷಾಂತರ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ನಂಜನಗೂಡಿನ ದೇವಸ್ಥಾನದ ಬೀದಿ ಮಾತ್ರವಲ್ಲ, ಪ್ರಮುಖ ರಸ್ತೆಗಳಲ್ಲಿ ಕೂಡಾ ರಥ ಸಾಗಿ ಬಂತು ದೇವಸ್ಥಾನ ಸೇರಿತು. ಈ ಸಮಯದಲ್ಲಿ ಲಕ್ಷಾಂತರ ಜನರು ರಥಗಳ ಮೇಲೆ ಹಣ್ಣು ಜವನವನ್ನು ಎಸೆದು ಭಕ್ತಿಭಾವ ಮೆರೆದರು.
ಶ್ರೀಕಂಠೇಶ್ವರಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಬೃಹತ್ ರಥ ಸುಮಾರು 108 ಅಡಿ ಎತ್ತರವಿದ್ದು 110 ಟನ್ ತೂಕವಿದೆ. ಈ ಬೃಹತ್ ರಥವನ್ನು ಹರ್ಷೋದ್ಗಾರಗಳ ನಡುವೆ ಎಳೆಯುವ ಮೂಲಕ ಭಕ್ತರು ಪುನೀತರಾದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…