ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ (ಮಾರ್ಚ್ 22) ಅದ್ಧೂರಿಯಾಗಿ ಪಂಚ ಮಹಾರಥೋತ್ಸವ ನೆರವೇರಿತು. ಲಕ್ಷಾಂತರ ಮಂದಿ ಭಕ್ತರು ಬೇರೆ-ಬೇರೆ ಊರುಗಳಿಂದ ಆಗಮಿಸಿ ದೇವರ ದರ್ಶನಕ್ಕೆ ಪಾತ್ರರಾದರು.
ಇಂದು ಬೆಳಿಗ್ಗೆ 6:30 ರಿಂದ 6:50ರ ಒಳಗಿನಭ ಮೀನ ಲಗ್ನದಲ್ಲಿ ಈ ಬಾರಿಯ ಪಂಚಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಲಕ್ಷಾಂತರ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ನಂಜನಗೂಡಿನ ದೇವಸ್ಥಾನದ ಬೀದಿ ಮಾತ್ರವಲ್ಲ, ಪ್ರಮುಖ ರಸ್ತೆಗಳಲ್ಲಿ ಕೂಡಾ ರಥ ಸಾಗಿ ಬಂತು ದೇವಸ್ಥಾನ ಸೇರಿತು. ಈ ಸಮಯದಲ್ಲಿ ಲಕ್ಷಾಂತರ ಜನರು ರಥಗಳ ಮೇಲೆ ಹಣ್ಣು ಜವನವನ್ನು ಎಸೆದು ಭಕ್ತಿಭಾವ ಮೆರೆದರು.
ಶ್ರೀಕಂಠೇಶ್ವರಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಬೃಹತ್ ರಥ ಸುಮಾರು 108 ಅಡಿ ಎತ್ತರವಿದ್ದು 110 ಟನ್ ತೂಕವಿದೆ. ಈ ಬೃಹತ್ ರಥವನ್ನು ಹರ್ಷೋದ್ಗಾರಗಳ ನಡುವೆ ಎಳೆಯುವ ಮೂಲಕ ಭಕ್ತರು ಪುನೀತರಾದರು.
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…
ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…
ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…
ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…