ಮೈಸೂರು

ಪಿಡಿಒಗಳಿಗೆ ಚೆಕ್‌ಪೋಸ್ಟ್‌ ಹೊಣೆ ಇಲ್ಲ

ಮೈಸೂರು: ಲೋಕಸಭಾ ಚುನಾವಣೆ ಹಾಗೂ ಬರಗಾಲದ ಕರ್ತವ್ಯವನ್ನು ಜೊತೆಯಾಗಿ ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಜಿಲ್ಲಾಡಳಿತವು ಜಿಲ್ಲಾ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿ ನೀಡಲು ನಿರ್ಧರಿಸಿಕೊಂಡಿದೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ಚುನಾವಣಾ ಇತಿಹಾಸದಲ್ಲಿಯೇ ಇದೇ ಪ್ರಥಮ ಬಾರಿಗೆ ಚುನಾವಣಾ ಚೆಕ್ಪೋಸ್ಟ್ , ಸೆಕ್ಟರ್ ಅಧಿಕಾರಿಗಳಿಗೆ ಕರ್ತವ್ಯದಿಂದ ವಿನಾಯಿತಿ ನೀಡಿದೆ. ರಾಜ್ಯದಲ್ಲಿ ಇದು ಮೊಟ್ಟ ಮೊದಲ ಪ್ರಯತ್ನವಾಗಿದ್ದು, ಹೀಗೆ ಪ್ರತ್ಯೇಕ ತರಬೇತಿ ನೀಡಿದ ಉದಾಹರಣೆಗಳಿಲ್ಲ ಎಂದರು.
ಅಭಿವೃದ್ದಿಅಧಿಕಾರಿಗಳನ್ನು ಚೆಕ್ಪೋಸ್ಟ್ಗಳಿಗೆ ನಿಯೋಜಿಸಿದರೆ, ಹಗಲು-ರಾತ್ರಿ ಪಾಳಿಯ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸ ಬೇಕಾಗುತ್ತದೆ. ಆಗ ದೈನಂದಿನ ಆಡಳಿತಾತ್ಮಕ ಕೆಲಸಗಳಿಗೆ,  ಕುಡಿಯುವ ನೀರು ಪೂರೈಕೆ ಸೇರಿದಂತೆ ಮತ್ತು ಬರಗಾಲ ನಿರ್ವಹಣೆಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ಅಧಿಕಾರಿಗಳನ್ನು ಸೆಕ್ಟರ್ ಅಧಿಕಾರಿಗಳ ತಂಡಕ್ಕೆ ಮತ್ತು ಚೆಕ್ಪೋಸ್ಟ್ಗಳಿಗೆ ನಿಯೋಜಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಹೇಳಿದರು.
ಅಧಿಕಾರಿಗಳು ಕಳೆದ ಚುನಾವಣೆ ಸಂದರ್ಭದಲ್ಲಿ ಚೆಕ್ಪೋಸ್ಟ್ಗಳನ್ನು ನಿಯೋಜಿಸುವುದರಿಂದಾಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆದಿದ್ದರು ಎಂದು ಮೂಲಗಳಿಂದ ತಿಳಿದಿದ್ದು, ಮತಗಟ್ಟೆಗಳಿಗೆ ವಿದ್ಯುತ್, ರ್ಯಾಂಪ್ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸುವುದಲ್ಲದೆ, ಮತದಾನ ಪ್ರಮಾಣ ಅಧಿಕವಾಗಿಸುವಲ್ಲಿ ಶ್ರಮಿಸುವ ನೀತಿ ಸಂಹಿತೆ ಪಾಲನೆಯ ಕರ್ತವ್ಯ ಮತ್ತು ಸ್ವೀಪ್ ಚಟುವಟಿಕೆಗಳನ್ನು ನಿಭಾಯಿಸಲಿದ್ದಾರೆ. ಈ ಮೂರು ಚಟುವಟಿಕೆಗಳ ನಿರ್ವಹಣೆ ವಿಚಾರವಾಗಿ ಈ ಅಧಿಕಾರಿಗಳು ಅವರ ಪಂಚಾಯಿತಿಯ ಕಾರ್ಯವ್ಯಾಪ್ತಿಯಲ್ಲಯೇ ನಿರಂತರವಾಗಿ ಸಂಚರಿಸಬೇಕಾಗುತ್ತದೆ. ಈ ಕಾರಣಕ್ಕಾಗಿ ಅವರು ಸ್ಥಳೀಯ ಸಾರ್ಜನಿಕರ ಸಂಪರ್ಕಕ್ಕೂ ಸುಲಭವಾಗಿ ಸಿಗುವಂತಾಗುತ್ತದೆ ಎಂದು ಜಿಲ್ಲಾಡಳಿತದ ದೃಷ್ಟಿಕೋನವಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣೆಯ ಕರ್ತವ್ಯಗಳನ್ನು ಕುರಿತು ಆಯೋಗ ಆದೇಶಗಳನ್ನು ರವಾನಿಸುವ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, ಕರ್ತವ್ಯ ನಿರ್ವಹಣೆ ಹೇಗೆ ಎಂಬ ಬಗ್ಗೆ ಸ್ಪಷ್ಟ ಸೂಚನೆ ಹಾಗೂ  ಮಾರ್ಗದರ್ಶನ ನೀಡುವ ಪ್ರಯತ್ನಗಳು ಬೇಕೆಂಬ ಕಾರಣಕ್ಕೆ ತರಬೇತಿಯನ್ನು ಆಯೋಜಿಸಲಾಗಿದೆ.
ಚುನಾವಣೆ ಸಿಬ್ಬಂದಿಗೆ ಮಾದರಿ ನೀತಿ ಸಂಹಿತೆ ಪಾಲನೆ , ಚುನಾವನಾ ವೆಚ್ಚ ಪರಿಶೀಲನೆ, ವಿಡಿಯೋ ವೀಕ್ಷಣೆ ತಂಡ, ಫ್ಲೆಯಿಂಗ್ ಸ್ಕ್ವಾಡ್, ಸೆಕ್ಟರ್ ಮತ್ತು ವಿವಿಧ ರೀತಿಯ ತರಬೇತಿಗಳನ್ನು ಅಧಿಕಾರಿಗಳ ತಂಡಗಳಿಗೆ ನೀಡುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ತರಬೇತಿ ಕಾರ್ಯಕ್ರಮವೂ ಭರದಿಂದ ಸಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ತಿಳಿಸಿದರು.
andolana

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

1 hour ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

2 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

2 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

2 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

2 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

2 hours ago