ಮೈಸೂರು

ಪಿಡಿಒಗಳಿಗೆ ಚೆಕ್‌ಪೋಸ್ಟ್‌ ಹೊಣೆ ಇಲ್ಲ

ಮೈಸೂರು: ಲೋಕಸಭಾ ಚುನಾವಣೆ ಹಾಗೂ ಬರಗಾಲದ ಕರ್ತವ್ಯವನ್ನು ಜೊತೆಯಾಗಿ ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಜಿಲ್ಲಾಡಳಿತವು ಜಿಲ್ಲಾ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿ ನೀಡಲು ನಿರ್ಧರಿಸಿಕೊಂಡಿದೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ಚುನಾವಣಾ ಇತಿಹಾಸದಲ್ಲಿಯೇ ಇದೇ ಪ್ರಥಮ ಬಾರಿಗೆ ಚುನಾವಣಾ ಚೆಕ್ಪೋಸ್ಟ್ , ಸೆಕ್ಟರ್ ಅಧಿಕಾರಿಗಳಿಗೆ ಕರ್ತವ್ಯದಿಂದ ವಿನಾಯಿತಿ ನೀಡಿದೆ. ರಾಜ್ಯದಲ್ಲಿ ಇದು ಮೊಟ್ಟ ಮೊದಲ ಪ್ರಯತ್ನವಾಗಿದ್ದು, ಹೀಗೆ ಪ್ರತ್ಯೇಕ ತರಬೇತಿ ನೀಡಿದ ಉದಾಹರಣೆಗಳಿಲ್ಲ ಎಂದರು.
ಅಭಿವೃದ್ದಿಅಧಿಕಾರಿಗಳನ್ನು ಚೆಕ್ಪೋಸ್ಟ್ಗಳಿಗೆ ನಿಯೋಜಿಸಿದರೆ, ಹಗಲು-ರಾತ್ರಿ ಪಾಳಿಯ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸ ಬೇಕಾಗುತ್ತದೆ. ಆಗ ದೈನಂದಿನ ಆಡಳಿತಾತ್ಮಕ ಕೆಲಸಗಳಿಗೆ,  ಕುಡಿಯುವ ನೀರು ಪೂರೈಕೆ ಸೇರಿದಂತೆ ಮತ್ತು ಬರಗಾಲ ನಿರ್ವಹಣೆಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ಅಧಿಕಾರಿಗಳನ್ನು ಸೆಕ್ಟರ್ ಅಧಿಕಾರಿಗಳ ತಂಡಕ್ಕೆ ಮತ್ತು ಚೆಕ್ಪೋಸ್ಟ್ಗಳಿಗೆ ನಿಯೋಜಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಹೇಳಿದರು.
ಅಧಿಕಾರಿಗಳು ಕಳೆದ ಚುನಾವಣೆ ಸಂದರ್ಭದಲ್ಲಿ ಚೆಕ್ಪೋಸ್ಟ್ಗಳನ್ನು ನಿಯೋಜಿಸುವುದರಿಂದಾಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆದಿದ್ದರು ಎಂದು ಮೂಲಗಳಿಂದ ತಿಳಿದಿದ್ದು, ಮತಗಟ್ಟೆಗಳಿಗೆ ವಿದ್ಯುತ್, ರ್ಯಾಂಪ್ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸುವುದಲ್ಲದೆ, ಮತದಾನ ಪ್ರಮಾಣ ಅಧಿಕವಾಗಿಸುವಲ್ಲಿ ಶ್ರಮಿಸುವ ನೀತಿ ಸಂಹಿತೆ ಪಾಲನೆಯ ಕರ್ತವ್ಯ ಮತ್ತು ಸ್ವೀಪ್ ಚಟುವಟಿಕೆಗಳನ್ನು ನಿಭಾಯಿಸಲಿದ್ದಾರೆ. ಈ ಮೂರು ಚಟುವಟಿಕೆಗಳ ನಿರ್ವಹಣೆ ವಿಚಾರವಾಗಿ ಈ ಅಧಿಕಾರಿಗಳು ಅವರ ಪಂಚಾಯಿತಿಯ ಕಾರ್ಯವ್ಯಾಪ್ತಿಯಲ್ಲಯೇ ನಿರಂತರವಾಗಿ ಸಂಚರಿಸಬೇಕಾಗುತ್ತದೆ. ಈ ಕಾರಣಕ್ಕಾಗಿ ಅವರು ಸ್ಥಳೀಯ ಸಾರ್ಜನಿಕರ ಸಂಪರ್ಕಕ್ಕೂ ಸುಲಭವಾಗಿ ಸಿಗುವಂತಾಗುತ್ತದೆ ಎಂದು ಜಿಲ್ಲಾಡಳಿತದ ದೃಷ್ಟಿಕೋನವಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣೆಯ ಕರ್ತವ್ಯಗಳನ್ನು ಕುರಿತು ಆಯೋಗ ಆದೇಶಗಳನ್ನು ರವಾನಿಸುವ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, ಕರ್ತವ್ಯ ನಿರ್ವಹಣೆ ಹೇಗೆ ಎಂಬ ಬಗ್ಗೆ ಸ್ಪಷ್ಟ ಸೂಚನೆ ಹಾಗೂ  ಮಾರ್ಗದರ್ಶನ ನೀಡುವ ಪ್ರಯತ್ನಗಳು ಬೇಕೆಂಬ ಕಾರಣಕ್ಕೆ ತರಬೇತಿಯನ್ನು ಆಯೋಜಿಸಲಾಗಿದೆ.
ಚುನಾವಣೆ ಸಿಬ್ಬಂದಿಗೆ ಮಾದರಿ ನೀತಿ ಸಂಹಿತೆ ಪಾಲನೆ , ಚುನಾವನಾ ವೆಚ್ಚ ಪರಿಶೀಲನೆ, ವಿಡಿಯೋ ವೀಕ್ಷಣೆ ತಂಡ, ಫ್ಲೆಯಿಂಗ್ ಸ್ಕ್ವಾಡ್, ಸೆಕ್ಟರ್ ಮತ್ತು ವಿವಿಧ ರೀತಿಯ ತರಬೇತಿಗಳನ್ನು ಅಧಿಕಾರಿಗಳ ತಂಡಗಳಿಗೆ ನೀಡುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ತರಬೇತಿ ಕಾರ್ಯಕ್ರಮವೂ ಭರದಿಂದ ಸಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ತಿಳಿಸಿದರು.
andolana

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

24 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago