ಮೈಸೂರು : ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು.
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ದಸರಾ ಪ್ರಯುಕ್ತ ಪ್ರತಿ ವರ್ಷ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಪುಟ್ಟರಾಜ ಗವಾಯಿಗಳ ಗರಡಿಯಲ್ಲಿ ಪಳಗಿದ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ನೀಡಲಾಗಿದೆ. ಅತಿ ಬಡತನದ ಕುಟುಂಬದಿಂದ ಬಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಂಗೀತ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ ವೆಂಕಟೇಶ್ ಕುಮಾರ್ ಸಂಗೀತ ವಿದ್ವಾನ್ ಪುರಸ್ಕಾರಕ್ಕೆ ಅತೀ ಅರ್ಹರು. ಇದು ನಮಗೇ ಸಲ್ಲುವ ಗೌರವ ಎಂದರು.
ಸಂಗೀತಕ್ಕೆ ಆಸಕ್ತಿ , ಶ್ರದ್ದೆ, ಏಕಾಗ್ರತೆ, ಶ್ರಮ ಅಗತ್ಯ. ಇಷ್ಟು ಇದ್ದರೆ ಸಂಗೀತ ಸಾಧನೆ ಸಾಧ್ಯ ಎಂದರು.
ಕಲಾನಿಧಿ ವಿದ್ವಾನ್ ವಾಸುದೇವಾಚಾರ್ಯ ಅವರ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎನ್ನುವ ಶಾಸಕ ಶ್ರೀವತ್ಸ ಅವರ ಬೇಡಿಕೆಯಂತೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…