ಮೈಸೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅಂಗವಾಗಿ ಅಟಲ್ ಜನ್ಮ ಶತಾಬ್ಧಿ ಕಾರ್ಯಕ್ರಮ ನಡೆಯುತ್ತಿದ್ದು, ಫೆಬ್ರವರಿ 15 ರಿಂದ ಮಾರ್ಚ್ 15 ರವರೆಗೆ ಅಟಲ್ ಜೀ ಬಗ್ಗೆ ಸಮಾವೇಶ ಆಯೋಜನೆ ಮಾಡಲಾಗುವುದು ಎಂದು ಅಟಲ್ ಜೀ ಜನ್ಮ ಶತಾಬ್ಧಿ ಸಮಿತಿಯ ರಾಜ್ಯ ಸಹ ಸಂಚಾಲಕ ಫಣೀಶ್ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.4) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2024ರ ಡಿಸೆಂಬರ್ 25 ರಿಂದ 2025 ಡಿಸೆಂಬರ್ 25 ರವರೆಗೆ ಅಟಲ್ ಜನ್ಮ ಶತಾಬ್ದಿ ಕಾರ್ಯಕ್ರಮ ನಡೆಯುತ್ತಿದೆ. ಅವರು ದೇಶ ಕಂಡ ಅತ್ಯಂತ ಶ್ರೇಷ್ಠ ರಾಜಕಾರಣಿಯಾಗಿದ್ದರು. ಅವರನ್ನು ರಾಷ್ಟ್ರ ರಾಜಕಾರಣದಲ್ಲೇ ಅಜಾತ ಶತ್ರು ಎಂದು ಕರೆಯಲಾಗಿತ್ತು. ಅಲ್ಲದೇ ಅವರ ಬಗ್ಗೆ ವಿರೋಧ ಪಕ್ಷದ ನಾಯಕರು ಕೂಡ ಅಭಿಮಾನವನ್ನು ಹೊಂದಿದ್ದು, ಈಗಿನ ರಾಜಕಾರಣಿಗಳಿಗೆ ಆದರ್ಶರಾಗಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದರು.
ಈ ಕಾರ್ಯಕ್ರಮವನ್ನು ವಾಜಪೇಯಿ ಅವರ 100ನೇ ಜನ್ಮ ದಿನೋತ್ಸವ ಪ್ರಯುಕ್ತ ವರ್ಷಪೂರ್ತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಜೊತೆಗೆ 12 ಜನರ ತಂಡ ಕಾರ್ಯಕ್ರಮ ಸಮಿತಿಯಲ್ಲಿರಲಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಶತಮಾನೋತ್ಸದ ಅಂಗವಾಗಿ ಅವರ ಮೂರು ಮುಖಗಳಾದ ಸಂಘಟನಾತ್ಮಕ, ಹೋರಾಟ ಹಾಗೂ ವ್ಯಕ್ತಿತ್ವದ ಆಧಾರದ ಮೇಲೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…