ಮೈಸೂರು

ಅಟಲ್‌ ಬಿಹಾರಿ ವಾಜಪೇಯಿ ಶತಾಬ್ಧಿ ಕಾರ್ಯಕ್ರಮ: ಫೆ.15 ರಿಂದ ಸಮಾವೇಶ

ಮೈಸೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅಂಗವಾಗಿ ಅಟಲ್‌ ಜನ್ಮ ಶತಾಬ್ಧಿ ಕಾರ್ಯಕ್ರಮ ನಡೆಯುತ್ತಿದ್ದು, ಫೆಬ್ರವರಿ 15 ರಿಂದ ಮಾರ್ಚ್‌ 15 ರವರೆಗೆ ಅಟಲ್‌ ಜೀ ಬಗ್ಗೆ ಸಮಾವೇಶ ಆಯೋಜನೆ ಮಾಡಲಾಗುವುದು ಎಂದು ಅಟಲ್‌ ಜೀ ಜನ್ಮ ಶತಾಬ್ಧಿ ಸಮಿತಿಯ ರಾಜ್ಯ ಸಹ ಸಂಚಾಲಕ ಫಣೀಶ್‌ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.4) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2024ರ ಡಿಸೆಂಬರ್ 25 ರಿಂದ 2025 ಡಿಸೆಂಬರ್‌ 25 ರವರೆಗೆ ಅಟಲ್ ಜನ್ಮ ಶತಾಬ್ದಿ ಕಾರ್ಯಕ್ರಮ ನಡೆಯುತ್ತಿದೆ. ಅವರು ದೇಶ ಕಂಡ ಅತ್ಯಂತ ಶ್ರೇಷ್ಠ ರಾಜಕಾರಣಿಯಾಗಿದ್ದರು. ಅವರನ್ನು ರಾಷ್ಟ್ರ ರಾಜಕಾರಣದಲ್ಲೇ ಅಜಾತ ಶತ್ರು ಎಂದು ಕರೆಯಲಾಗಿತ್ತು. ಅಲ್ಲದೇ ಅವರ ಬಗ್ಗೆ ವಿರೋಧ ಪಕ್ಷದ ನಾಯಕರು ಕೂಡ ಅಭಿಮಾನವನ್ನು ಹೊಂದಿದ್ದು, ಈಗಿನ ರಾಜಕಾರಣಿಗಳಿಗೆ ಆದರ್ಶರಾಗಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದರು.

ಈ ಕಾರ್ಯಕ್ರಮವನ್ನು ವಾಜಪೇಯಿ ಅವರ 100ನೇ ಜನ್ಮ ದಿನೋತ್ಸವ ಪ್ರಯುಕ್ತ ವರ್ಷಪೂರ್ತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಜೊತೆಗೆ 12 ಜನರ ತಂಡ ಕಾರ್ಯಕ್ರಮ ಸಮಿತಿಯಲ್ಲಿರಲಿದೆ. ಅಟಲ್‌ ಬಿಹಾರಿ ವಾಜಪೇಯಿ ಅವರ ಶತಮಾನೋತ್ಸದ ಅಂಗವಾಗಿ ಅವರ ಮೂರು ಮುಖಗಳಾದ ಸಂಘಟನಾತ್ಮಕ, ಹೋರಾಟ ಹಾಗೂ ವ್ಯಕ್ತಿತ್ವದ ಆಧಾರದ ಮೇಲೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

18 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

38 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

42 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

3 hours ago