ಮೈಸೂರು

ಪೇಪರ್ ಸುಬ್ಬಣ್ಣ ಇನ್ನಿಲ್ಲ

ಮೈಸೂರು : ಅದೊಂದು ರಸ್ತೆ ಬದಿಯಲ್ಲೇ ಸೃಷ್ಟಿಯಾಗಿದ್ದ ತೆರೆದ ಸುದ್ದಿಮನೆ! ಅಲ್ಲಿ ಕ್ಷಣಕಾಲ ನಿಂತರೆ ಲೋಕದ ಪ್ರಚಲಿತ ವಿದ್ಯಮಾನಗಳು ಗಮನಕ್ಕೆ ಬರುತ್ತಿತ್ತು. ನಗರದ ಹೃದಯ ಭಾಗ ಲ್ಯಾನ್ಸ್‌ಡೌನ್ ಕಟ್ಟಡದ ಮಳಿಗೆಯಲ್ಲಿ ಮೂರ್ನಾಲ್ಕು ದಶಕಗಳ ಕಾಲ ಜಗತ್ತಿನ ಬಹುತೇಕ ಸುದ್ದಿ ಪತ್ರಿಕೆಗಳನ್ನು ಮಾರುವ ಕಾಯಕವನ್ನೇ ತಪ್ಪಸ್ಸಿನಂತೆ 70 ವರ್ಷಗಳಿಗೂ ಹೆಚ್ಚು ಕಾಲ ನಡೆಸಿಕೊಂಡು ಬರುವ ಮೂಲಕ ಎಂ.ಆರ್.ಸುಬ್ರಹ್ಮಣ್ಯ (87), ಪೇಪರ್ ಸುಬ್ಬಣ್ಣ ಎಂದೇ ಹೆಸರಾಗಿದ್ದರು.

ಬಾಲಕನಾಗಿದ್ದಾಗಲೇ ಮೈಸೂರಿಗೆ ಬಂದು ಪತ್ರಿಕಾ ಮಾರಾಟದ ವೃತ್ತಿಯನ್ನು ಆಯ್ಕೆ ಮಾಡಿಕೊಂಡ ಸುಬ್ಬಣ್ಣ ಅವರು, ಲ್ಯಾನ್ಸ್‌ಡೌನ್ ಕಟ್ಟಡ ಕುಸಿದು ಬಿದ್ದಾಗಲೂ ತನ್ನ ಕಾಯಕ ನಿಷ್ಠೆಯನ್ನು ಮರೆಯಲಿಲ್ಲ. ಬದಲಿಗೆ ಜಗನ್ಮೋಹನ ಅರಮನೆ ರಸ್ತೆ ಬದಿಯಲ್ಲೇ ಪತ್ರಿಕೆಗಳ ಮಾರಾಟವನ್ನು ಮುಂದುವರಿಸಿದರು. ತನ್ನ ಕೊನೆಯ ದಿನದ ವರೆಗೂ ಅವರು ತನ್ನ ಕಾಯಕವನ್ನು ಮರೆಯಲಿಲ್ಲ. ಮಳೆ-ಬಿಸಿಲೆನ್ನದೇ ಜಗನ್ಮೋಹನ ಅರಮನೆ ರಸ್ತೆಯ ಲ್ಯಾನ್ಸ್‌ಡೌನ್ ಕಟ್ಟಡದ ಒಂದು ಪಾರ್ಶ್ವದಲ್ಲಿ ಪತ್ರಿಕೆಗಳನ್ನು ಹರಡಿಕೊಂಡು ಗ್ರಾಹಕರನ್ನು ನಿರೀಕ್ಷಿಸುತ್ತಾ ಕುಳಿತಿರುತ್ತಿದ್ದ ದೃಶ್ಯಆ ರಸ್ತೆಯಲ್ಲಿ ಸಾಗಿದವರಿಗೆ ಕಣ್ಣಿಗೆ ಕಟ್ಟಿದಂತಿದೆ. ಹೀಗೆ ಪತ್ರಿಕೆಗಳನ್ನು ಹರಡಿಕೊಂಡು ಕುಳಿತ ಸುಬ್ಬಣ್ಣ, ಪತ್ರಿಕೆ ಮಾರಾಟ ಮಾಡಿ ಹಣ ಏಣಿಸಿಕೊಂಡು ಹೋದವರಲ್ಲ. ಮೈಸೂರು ನಗರದಲ್ಲಿ ಪತ್ರಕರ್ತರ ಭವನ ಆರಂಭವಾಗುವುದಕ್ಕೂ ಮುನ್ನ ಸುಬ್ಬಣ್ಣನವರ ಪತ್ರಿಕಾ ಮಾರಾಟ ಮಳಿಗೆಯೇ ಸುದ್ದಿಗಳ ವಿನಿಮಯ, ಪತ್ರಕರ್ತರ ಚರ್ಚೆಯ ತಾಣವೂ ಆಗಿತ್ತು. ಹೀಗಾಗಿಯೇ ಮೈಸೂರಿನಲ್ಲಿ ಪತ್ರಿಕಾ ವೃತ್ತಿ ಆರಂಭಿಸಿ ಇಂದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಹಿರಿಯ ಪತ್ರಕರ್ತರಾಗಿ ಬೆಳೆದಿರುವವರೆಲ್ಲ ಮೈಸೂರಿಗೆ ಬಂದರೆ ಇಂದಿಗೂ ಸುಬ್ಬಣ್ಣ ಅವರನ್ನು ಮಾತನಾಡಿಸದೆ ಹೋಗುತ್ತಿರಲಿಲ್ಲ.

ಶನಿವಾರ ಮುಂಜಾನೆ ನಿಧನರಾದ ಎಂ.ಆರ್.ಸುಬ್ರಹ್ಮಣ್ಯ (೮೭) ಅವರ ಪಾರ್ಥೀವ ಶರೀರವನ್ನು ಚೆಲುವಾಂಬ ಅಗ್ರಹಾರದ ಅವರ ಮನೆುಂಲ್ಲಿ ಮಧ್ಯಾಹ್ನ ೨ ಗಂಟೆುಂವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿೆುಂ ನಡೆಸಲಾಯಿತು.
ಮೃತರು ಒಬ್ಬ ಪುತ್ರ, ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುಬ್ಬಣ್ಣನವರ ನಿಧನಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಪತ್ರಿಕಾ ವಿತರಕರ ಸಂಘ, ಪತ್ರಿಕಾ ವಿತರಕರ ಕ್ಷೇವಾಭಿವೃದ್ಧಿ ಸಂಘ ಹಾಗೂ ಪತ್ರಿಕಾ ಏಜೆಂಟರ ಸಂಘಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.

andolanait

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

9 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

9 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

9 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

9 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

10 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

10 hours ago