ಮೈಸೂರು: ರಾಜಕೀಯದಲ್ಲಿ ಯಾವಾಗ ಏನಾಗುತ್ತೋ ಗೋತ್ತಿಲ್ಲ ಎಂಬ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಆ ವಿವಾದದ ಬಗ್ಗೆ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಆ ರೀತಿ ಎಲ್ಲಿಯೂ ಹೇಳಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ. ಐದು ವರ್ಷವೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಪಕ್ಷದ ಅಧ್ಯಕ್ಷರು ಬದಲಾದರೆ ಅಂತ ಈ ರೀತಿ ಹೇಳಿದೆ ಅಷ್ಟೇ, ನಾನು ಪಕ್ಷದ ವಿಚಾರವಾಗಿ ಬೇಗ ಕಟ್ಟಡ ಕಟ್ಟಿ ಅಂತ ಹೇಳಿದ್ದೆ ಅಷ್ಟೇ ಎಂದು ಸ್ಪಷ್ಟನೇ ನೀಡಿದರು.
ಕಾಂಗ್ರೆಸ್ ಕಚೇರಿಯಲ್ಲಿ ಪರಮೇಶ್ವರ್ ಹೇಳಿದ್ದೇನು?
ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪರಮೇಶ್ವರ್, ಆದಷ್ಟು ಬೇಗ ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿ ಕಟ್ಟುಬಿಡಿ. ಮುಂದೆ ಏನ್ ಆಗತ್ತೋ ಗೊತ್ತಿಲ್ಲ. ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದ್ರೆ ಏನೂ ಹೇಳಲಿಕ್ಕೆ ಆಗಲ್ಲ ಅಂತ ಹೇಳಿದ್ದರು.
ಇಲ್ಲಿನ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸ್ಥಳ ಪಡೆಯಲು ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ಚಂದ್ರಪ್ರಭಾ ಅರಸು ಜೊತೆ ಸಾಕಷ್ಟು ಮೀಟಿಂಗ್ ಮಾಡಿದ್ದೇನೆ. ಈಗ ಶೀಘ್ರದಲ್ಲೇ 15 ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿಯನ್ನು ಕಟ್ಟಲು ಸಿಎಂ ಹೊರಟಿದ್ದಾರೆ ಎಂದು ಪರಮೇಶ್ವರ್ ಹೇಳಿದ್ರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…