ಮೈಸೂರು

ಪರಮೋತ್ಸವ | ಹೈಕಮಾಂಡ್‌ಗೆ ಎಚ್ಚರಿಕೆ ಸಂದೇಶ ರವಾನಿಸಿದ ಗೃಹ ಸಚಿವ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನಲೆ 2022ರಲ್ಲಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆದಿತ್ತು. ಇದೀಗ ಅದೇ ರೀತಿ ಸಿದ್ದರಾಮಯ್ಯ ತವರೂರಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಹುಟ್ಟುಹಬ್ಬ ಹಿನ್ನಲೆ ಅವರ ಅಭಿಮಾನಿಗಳಯ ಪರಮೋತ್ಸವ ಸಮಾವೇಶ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ದಲಿತರಿಗೆ ಹೆಜ್ಜೆ ಹೆಜ್ಜೆಗೂ ಅವಮಾನವಾಗುತ್ತಿದೆ. ಹೀಗಾಗಿ ನಮ್ಮ ಜನಗಳು ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಬೇಕು ಎಂದು ಕರೆ ನೀಡಿದ್ದಾರೆ. ಈ ಮೂಲಕ ದಲಿತ ಮುಖ್ಯಮಂತ್ರಿ ವಿಚಾರವಾಗಿ ಹೈಕಮಾಂಡ್‌ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನಗರದ ಕಲಾಮಂದಿರದಲ್ಲಿ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ರಾಜು ಬಿಳಿಕೆರೆ ಅವರ ನೇತೃತ್ವದಲ್ಲಿ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ‘ಪರಮೋತ್ಸವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೆಜ್ಜೆ ಹೆಜ್ಜೆಗೂ ದಲಿತರಿಗೆ ಅನ್ಯಾಯವಾಗುತ್ತಿದೆ. ಸಮಾನತೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿಕ್ಕೆ ಇನ್ನೆಷ್ಟು ವರ್ಷ ಕಾಯಬೇಕು. ಹೀಗಾಗಿ ನೀವುಗಳು ಹೋರಾಟಕ್ಕೆ ಸಜ್ಜಾಗಬೇಕು. ನಮಗೆ ನ್ಯಾಯ ದೊರೆಯಬೇಕಾದಲ್ಲಿ ಹೋರಾಟದ ಮೂಲಕವೇ ಆಗಬೇಕು. ನೀವುಗಳು ಹೋರಾಟಕ್ಕೆ ಮುಂದಾಗದಿದ್ದಲ್ಲಿ ಅದು ಅಂಬೇಡ್ಕರ್ ಅವರಿಗೆ ಮಾಡುವ ಅವಮಾನ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಸಂಬಂಧ ರಾಜು ಬಿಳಿಕೆರೆ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗಿತ್ತು. ಇಲ್ಲಿ ಹುಟ್ಟುಹಬ್ಬ ಆಚರಿಸಿದಲ್ಲಿ ಬೇರೆ ಸಂದೇಶ ಹೋಗಬಹುದು ಎಂಬುದು ಕೆಲವರ ಭಾವನೆಯಾಗಿತ್ತು. ಅದೆಲ್ಲವನ್ನೂ ಮೀರಿ ರಾಜು ಅವರು ಉತ್ತಮವಾಗಿ ಸಮಾರಂಭ ಆಯೋಜಿಸಿದ್ದಾರೆ. ಅವರಿಗೆ ಮತ್ತು ಅವರ ಸ್ನೇಹಿತರಿಗೆ ಅಭಿನಂದನೆಗಳು ಎಂದರು.

ನಾನು ರಾಜಕೀಯಕ್ಕೆ ಬಂದದ್ದು ದಿ.ರಾಜೀವ್‌ಗಾಂಧಿ ಅವರಿಂದ. ಸಮಾನತೆಯ ಬಗ್ಗೆ ಅವರು ಸಾಕಷ್ಟು ಕನಸು ಕಂಡಿದ್ದರು. ಭಾರತ ಬದಲಾದ ಭಾರತವಾಗಬೇಕು ಎಂಬುದು ಅವರ ಆಸೆಯಾಗಿತ್ತು. ಆದರೆ, ಅವರ ಆಸೆ ಇಂದಿಗೂ ಈಡೇರಿಲ್ಲ ಎಂದು ಹೇಳಿದರು.

ಸಮಾಜ ನಮ್ಮನ್ನು ಎಲ್ಲರಂತೆ ನೋಡುವವರೆಗೂ ಮೀಸಲಾತಿ ಇರಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಆದರೆ, ಇಂದಿಗೂ ಮೀಸಲಾತಿಗೆ ಹೊಡೆದಾಡುತ್ತಿದ್ದೇವೆ. ಈಗ ಒಳ ಮೀಸಲಾತಿಗೂ ಹೋರಾಟ ನಡೆಯುತ್ತಿದೆ. ಇದು ಬದಲಾಗುವುದು ಯಾವಾಗ ಎಂದು ಪ್ರಶ್ನಿಸಿದರು.

ನಿನ್ನಲ್ಲಿ ಜಮೀನಿಲ್ಲ, ಆರ್ಥಿಕವಾಗಿ ನೀನು ಸಬಲನಲ್ಲ. ಆದರೂ ನೀನು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದಾದಲ್ಲಿ ಮೊದಲು ನೀನು ಶಿಕ್ಷಿತನಾಗು. ಶಿಕ್ಷಣ ಮಾತ್ರ ನಿನ್ನ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಅದು ಇಂದಿಗೂ ಪ್ರಸ್ತುತ ಎಂದರು.

ಕಾರ್ಯಕ್ರಮದಲ್ಲಿ ಜ್ಞಾನಸ್ವರೂಪಾನಂದ ಸ್ವಾಮೀಜಿ, ನಿವೃತ್ತ ಪ್ರಾಧ್ಯಾಪಕ ಡಾ.ಕೆ.ವಿ.ಅಯ್ಯಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ತಿವಾರಿ, ಮಾಜಿ ಮಹಾಪೌರ ಪುರುಷೋತ್ತಮ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…

2 mins ago

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

51 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

2 hours ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

2 hours ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

3 hours ago