ಮೈಸೂರು

ಪರಮೋತ್ಸವ | ಹೈಕಮಾಂಡ್‌ಗೆ ಎಚ್ಚರಿಕೆ ಸಂದೇಶ ರವಾನಿಸಿದ ಗೃಹ ಸಚಿವ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನಲೆ 2022ರಲ್ಲಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆದಿತ್ತು. ಇದೀಗ ಅದೇ ರೀತಿ ಸಿದ್ದರಾಮಯ್ಯ ತವರೂರಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಹುಟ್ಟುಹಬ್ಬ ಹಿನ್ನಲೆ ಅವರ ಅಭಿಮಾನಿಗಳಯ ಪರಮೋತ್ಸವ ಸಮಾವೇಶ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ದಲಿತರಿಗೆ ಹೆಜ್ಜೆ ಹೆಜ್ಜೆಗೂ ಅವಮಾನವಾಗುತ್ತಿದೆ. ಹೀಗಾಗಿ ನಮ್ಮ ಜನಗಳು ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಬೇಕು ಎಂದು ಕರೆ ನೀಡಿದ್ದಾರೆ. ಈ ಮೂಲಕ ದಲಿತ ಮುಖ್ಯಮಂತ್ರಿ ವಿಚಾರವಾಗಿ ಹೈಕಮಾಂಡ್‌ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನಗರದ ಕಲಾಮಂದಿರದಲ್ಲಿ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ರಾಜು ಬಿಳಿಕೆರೆ ಅವರ ನೇತೃತ್ವದಲ್ಲಿ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ‘ಪರಮೋತ್ಸವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೆಜ್ಜೆ ಹೆಜ್ಜೆಗೂ ದಲಿತರಿಗೆ ಅನ್ಯಾಯವಾಗುತ್ತಿದೆ. ಸಮಾನತೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿಕ್ಕೆ ಇನ್ನೆಷ್ಟು ವರ್ಷ ಕಾಯಬೇಕು. ಹೀಗಾಗಿ ನೀವುಗಳು ಹೋರಾಟಕ್ಕೆ ಸಜ್ಜಾಗಬೇಕು. ನಮಗೆ ನ್ಯಾಯ ದೊರೆಯಬೇಕಾದಲ್ಲಿ ಹೋರಾಟದ ಮೂಲಕವೇ ಆಗಬೇಕು. ನೀವುಗಳು ಹೋರಾಟಕ್ಕೆ ಮುಂದಾಗದಿದ್ದಲ್ಲಿ ಅದು ಅಂಬೇಡ್ಕರ್ ಅವರಿಗೆ ಮಾಡುವ ಅವಮಾನ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಸಂಬಂಧ ರಾಜು ಬಿಳಿಕೆರೆ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗಿತ್ತು. ಇಲ್ಲಿ ಹುಟ್ಟುಹಬ್ಬ ಆಚರಿಸಿದಲ್ಲಿ ಬೇರೆ ಸಂದೇಶ ಹೋಗಬಹುದು ಎಂಬುದು ಕೆಲವರ ಭಾವನೆಯಾಗಿತ್ತು. ಅದೆಲ್ಲವನ್ನೂ ಮೀರಿ ರಾಜು ಅವರು ಉತ್ತಮವಾಗಿ ಸಮಾರಂಭ ಆಯೋಜಿಸಿದ್ದಾರೆ. ಅವರಿಗೆ ಮತ್ತು ಅವರ ಸ್ನೇಹಿತರಿಗೆ ಅಭಿನಂದನೆಗಳು ಎಂದರು.

ನಾನು ರಾಜಕೀಯಕ್ಕೆ ಬಂದದ್ದು ದಿ.ರಾಜೀವ್‌ಗಾಂಧಿ ಅವರಿಂದ. ಸಮಾನತೆಯ ಬಗ್ಗೆ ಅವರು ಸಾಕಷ್ಟು ಕನಸು ಕಂಡಿದ್ದರು. ಭಾರತ ಬದಲಾದ ಭಾರತವಾಗಬೇಕು ಎಂಬುದು ಅವರ ಆಸೆಯಾಗಿತ್ತು. ಆದರೆ, ಅವರ ಆಸೆ ಇಂದಿಗೂ ಈಡೇರಿಲ್ಲ ಎಂದು ಹೇಳಿದರು.

ಸಮಾಜ ನಮ್ಮನ್ನು ಎಲ್ಲರಂತೆ ನೋಡುವವರೆಗೂ ಮೀಸಲಾತಿ ಇರಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಆದರೆ, ಇಂದಿಗೂ ಮೀಸಲಾತಿಗೆ ಹೊಡೆದಾಡುತ್ತಿದ್ದೇವೆ. ಈಗ ಒಳ ಮೀಸಲಾತಿಗೂ ಹೋರಾಟ ನಡೆಯುತ್ತಿದೆ. ಇದು ಬದಲಾಗುವುದು ಯಾವಾಗ ಎಂದು ಪ್ರಶ್ನಿಸಿದರು.

ನಿನ್ನಲ್ಲಿ ಜಮೀನಿಲ್ಲ, ಆರ್ಥಿಕವಾಗಿ ನೀನು ಸಬಲನಲ್ಲ. ಆದರೂ ನೀನು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದಾದಲ್ಲಿ ಮೊದಲು ನೀನು ಶಿಕ್ಷಿತನಾಗು. ಶಿಕ್ಷಣ ಮಾತ್ರ ನಿನ್ನ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಅದು ಇಂದಿಗೂ ಪ್ರಸ್ತುತ ಎಂದರು.

ಕಾರ್ಯಕ್ರಮದಲ್ಲಿ ಜ್ಞಾನಸ್ವರೂಪಾನಂದ ಸ್ವಾಮೀಜಿ, ನಿವೃತ್ತ ಪ್ರಾಧ್ಯಾಪಕ ಡಾ.ಕೆ.ವಿ.ಅಯ್ಯಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ತಿವಾರಿ, ಮಾಜಿ ಮಹಾಪೌರ ಪುರುಷೋತ್ತಮ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago